ನವದೆಹಲಿ: ದೆಹಲಿಯಲ್ಲಿ ಡೆಂಗ್ಯೂ ಜ್ವರ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಇಬ್ಬರು ಮಕ್ಕಳು ಸೇರಿದಂತೆ ಒಟ್ಟು 11 ಮಂದಿ ಈ ಮಾರಕ ರೋಗಕ್ಕೆ ಬಲಿಯಾಗಿದ್ದಾರೆ. ಇದು ಜನರ ಆತಂಕವನ್ನು ಇನ್ನಷ್ಟು ಹೆಚ್ಚಿಸಿದೆ.
ಆರು ವರ್ಷದ ಅಮನ್ ಶರ್ಮಾ ಮತ್ತು 7 ವರ್ಷದ ಅವಿನಾಶ್ ರಾವತ್ ಎಂಬ ಇಬ್ಬರು ಬಾಲಕರು ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ. ಜ್ವರ ಕಾಣಿಸಿಕೊಂಡಾಗ ಇವರನ್ನು ನಗರದ ಆಸ್ಪತ್ರೆಗಳಿಗೆ ಕರೆತರಲಾಗಿತ್ತು, ಆಸ್ಪತ್ರೆಯವರು ಇವರಿಗೆ ಡೆಂಗ್ಯೂವಿದ್ದ ಪರಿಣಾಮ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಹೀಗಾಗಿ ಬಾಲಕರು ಸಾವನ್ನಪ್ಪಿದ್ದಾರೆ. ಅಲ್ಲದೇ ಈ ವರ್ಷದಲ್ಲಿ ಒಟ್ಟು 1800 ಮಂದಿಯಲ್ಲಿ ಈ ರೋಗ ಕಾಣಿಸಿಕೊಂಡಿದೆ ಎಂದು ವರದಿ ತಿಳಿಸಿದೆ.
ಮಗ ಸತ್ತ ಎಂಬ ದುಃಖದಲ್ಲಿ ಅವಿನಾಶ್ ತಂದೆ ತಾಯಿ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಜನರಲ್ಲಿ ಆಸ್ಪತ್ರೆ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ಮೂಡುವಂತೆ ಮಾಡಿದೆ.
ಇದೀಗ ಎಚ್ಚೆತ್ತುಕೊಂಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಸ್ಪತ್ರೆಗಳ ವಿರುದ್ಧ ಗುಡುಗಿದ್ದಾರೆ. ಮಂಗಳವಾರ ಸರ್ಕಾರಿ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿರುವ ಅವರು ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದ್ದಾರೆ.
ಅಲ್ಲದೇ ಡೆಂಗ್ಯೂ ಪೀಡಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ಲೈಸೆನ್ಸ್ ರದ್ದುಗೊಳಿಸುವುದಾಗಿ ಗುಡುಗಿದ್ದಾರೆ. ಅಲ್ಲದೇ ಸರ್ಕಾರ ಡೆಂಗ್ಯೂ ನಿಯಂತ್ರಿಸಲು ಬೇಕಾದ ಎಲ್ಲಾ ಕ್ರಮವನ್ನೂ ಕೈಗೊಳ್ಳುತ್ತದೆ, ಜನ ಆತಂಕಗೊಳ್ಳಬಾರದು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.