ನವದೆಹಲಿ: ಹಿರಿಯ ಕಾಂಗ್ರೆಸ್ಸಿಗ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಎಕೆ ಆಂಟೋನಿಯವರ ಪುತ್ರ ಅನಿಲ್ ಆಂಟೋನಿ ಅವರು ಪ್ರಧಾನಿ ನರೇಂದ್ರ ಮೋದಿಯವರ ಕುರಿತ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಆಕ್ಷೇಪಗಳನ್ನು ವ್ಯಕ್ತಪಡಿಸಿದ್ದಕ್ಕಾಗಿ ಸ್ವಪಕ್ಷದವರಿಂದಲೇ ಭಾರೀ ವಾಗ್ದಾಳಿಗಳನ್ನು ಎದುರಿಸಿದ್ದಾರೆ. ಇದರಿಂದ ಬೇಸತ್ತು ಅವರು ಪಕ್ಷದಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.
“ನಾನು ಕೇರಳ ಕಾಂಗ್ರೆಸ್ನಲ್ಲಿನ ನನ್ನ ಪಾತ್ರಗಳಿಗೆ ರಾಜೀನಾಮೆ ನೀಡಿದ್ದೇನೆ. ವಾಕ್ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರು ನನ್ನ ಟ್ವೀಟ್ ಅನ್ನು ಹಿಂತೆಗೆದುಕೊಳ್ಳುವಂತೆ ಅಸಹಿಷ್ಣು ಕರೆಗಳನ್ನು ನೀಡುತ್ತಿದ್ದಾರೆ. ನಾನು ಇದನ್ನು ನಿರಾಕರಿಸಿದ್ದೇನೆ. ಬೇಸತ್ತು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಜೀವನ ಮುಂದುವರಿಯುತ್ತದೆ. ಕೆಳಗೆ ರಾಜೀನಾಮೆ ಪತ್ರವನ್ನು ಹಾಕಿದ್ದೇನೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಕೇರಳದ ಕಾಂಗ್ರೆಸ್ ಕೇಂದ್ರಕ್ಕೆ ಸವಾಲೊಡ್ಡಿದ ಬಳಿಕ ಈ ಬೆಳವಣಿಗೆ ಸಂಭವಿಸಿದೆ.
ಅನಿಲ್ ಆಂಟೋನಿ ಪ್ರಧಾನಿ ಮೋದಿ ವಿರುದ್ಧ ಬಿಬಿಸಿ ಸಾಕ್ಷ್ಯಚಿತ್ರವನ್ನು ವಿರೋಧಿಸಿ ಟ್ವಿಟ್ ಮಾಡಿದ್ದಾರೆ. ಹಲವು ವಿರೋಧಗಳ ಬಳಿಕವೂ ಅವರು ಟ್ವಿಟ್ ಅನ್ನು ಹಿಂಪಡೆದಿಲ್ಲ.
“ಬಿಜೆಪಿಯೊಂದಿಗೆ ದೊಡ್ಡ ಭಿನ್ನಾಭಿಪ್ರಾಯಗಳ ಹೊರತಾಗಿಯೂ ಬಿಬಿಸಿ ಸಾಕ್ಷ್ಯಚಿತ್ರವನ್ನು ವಿರೋಧಿಸುತ್ತೇನೆ. ಭಾರತದ ಕೆಟ್ಟ ಇತಿಹಾಸದ ಕಾರಣೀಕರ್ತ, ಇರಾನ್ ಯುದ್ಧದ ಮೆದುಳಾದ ಬ್ರಿಟನ್ನ ಸರ್ಕಾರಿ ಪ್ರಾಯೋಜಿತ ವಾಹಿನಿಯಾದ ಬಿಬಿಸಿಯನ್ನು ಭಾರತದಲ್ಲಿರುವವರು ಬೆಂಬಲಿಸುವುದು ನಮ್ಮ ಸಾರ್ವಭೌಮತ್ವವನ್ನು ದುರ್ಬಲಗೊಳಿಸುತ್ತದೆ” ಎಂದು ಅನಿಲ್ ಆಂಟೋನಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
I have resigned from my roles in @incindia @INCKerala.Intolerant calls to retract a tweet,by those fighting for free speech.I refused. @facebook wall of hate/abuses by ones supporting a trek to promote love! Hypocrisy thy name is! Life goes on. Redacted resignation letter below. pic.twitter.com/0i8QpNIoXW
— Anil K Antony (@anilkantony) January 25, 2023
Despite large differences with BJP, I think those in 🇮🇳 placing views of BBC, a 🇬🇧 state sponsored channel with a long history of 🇮🇳 prejudices,and of Jack Straw, the brain behind the Iraq war, over 🇮🇳 institutions is setting a dangerous precedence,will undermine our sovereignty.
— Anil K Antony (@anilkantony) January 24, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.