News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಮೃತ್‌ ಭಾರತ್ ಯೋಜನೆಯಡಿ ಅಭಿವೃದ್ಧಿ ಕಾಣಲಿದೆ ರಾಜ್ಯದ 50 ರೈಲು ನಿಲ್ದಾಣ

ಬೆಂಗಳೂರು: ಅಮೃತ್ ಭಾರತ್ ಯೋಜನೆಯಡಿ ಕರ್ನಾಟಕದ 52  ರೈಲು ನಿಲ್ದಾಣಗಳನ್ನು ಆಯ್ಕೆ ಮಾಡಲಾಗಿದ್ದು, ಇವುಗಳನ್ನು ದೀರ್ಘಾವಧಿ ದೃಷ್ಟಿಯೊಂದಿಗೆ ನಿರಂತರ ಅಭಿವೃದ್ಧಿ ಮಾಡಲಾಗುತ್ತದೆ.

ಈ ನಿಲ್ದಾಣಗಳು ನೈರುತ್ಯ ರೈಲೈಯ ಬೆಂಗಳೂರು, ಮೈಸೂರು, ಹುಬ್ಬಳ್ಳಿ ವಿಭಾಗದಲ್ಲಿ ಬರುತ್ತವೆ. ಜನರು ರೈಲು ಹತ್ತಲು ಬರುವ ಸ್ಥಳವಾಗಿ ಮಾತ್ರವಲ್ಲದೇ, ನಗರ ಕೇಂದ್ರವಾಗಿಯೂ ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸುವ ಗುರಿಯನ್ನು ಹೊಂದಲಾಗಿದೆ ಎಂದು ವರದಿಗಳು ತಿಳಿಸಿವೆ.

ಈ ರೈಲು ನಿಲ್ದಾಣಗಳನ್ನು  ಚಿಲ್ಲರೆ ಮಾರಾಟ ಮಳಿಗೆಗಳು, ಆಹಾರ ಮಳಿಗೆಗಳು, ಇನ್ಫೋಟೈನ್‌ಮೆಂಟ್ ಮತ್ತು ವಿರಾಮವನ್ನು ಉತ್ತೇಜಿಸುವ ನಗರ ಕೇಂದ್ರಗಳಾಗಿ ಹೊರಹೊಮ್ಮಿಸಬೇಕು ಎಂಬುದು ಪ್ರಧಾನಿಯವರ ದೂರದೃಷ್ಟಿಯಾಗಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಅನೀಶ್ ಹೆಗ್ಡೆ ಹೇಳಿದ್ದಾರೆ.

ರೈಲು ನಿಲ್ದಾಣ ಆವರಣದಲ್ಲಿ ಸುಗಮ ಸಂಚಾರಕ್ಕಾಗಿ ನೂತನ ರಸ್ತೆಗಳು, ಪಾದಚಾರಿ ಮಾರ್ಗಗಳು, ಸೈಕಲ್ ಪಥಗಳು, ಸ್ಕೈವಾಕ್‌ಗಳು ಮತ್ತು ಸೇತುವೆಗಳು ಇತ್ಯಾದಿಗಳನ್ನು ವಿಸ್ತರಣೆ ಮಾಡಲಾಗುತ್ತದೆ. ಅಲ್ಲದೇ,
ನಿಲ್ದಾಣದ ಒಳಗೆ, ಪ್ರಯಾಣಿಕರು ಕ್ಯೂನ ನಲ್ಲಿ ಆರಾಮದಾಯಕವಾಗಿ ಸಾಗುವಂತೆ ವ್ಯವಸ್ಥೆ, ಶುದ್ಧ ಕುಡಿಯುವ ನೀರು, ಶೌಚಾಲಯ, ದಿವ್ಯಾಂಗ ಸ್ನೇಹಿ ಸೌಕರ್ಯ ಮತ್ತಿತರ ಸೌಕರ್ಯ ಒದಗಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top