ನವದೆಹಲಿ: ರಾಜ್ಯಸಭೆಯ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಅನುಪಸ್ಥಿತಿಯಲ್ಲಿ ಲೆಜೆಂಡರಿ ಅಥ್ಲೀಟ್ ಪಿಟಿ ಉಷಾ ಅವರು ಇಂದು ರಾಜ್ಯಸಭೆಯ ಕಲಾಪಗಳ ಅಧ್ಯಕ್ಷತೆ ವಹಿಸಿದ್ದರು.
ಈ ಕ್ಷಣದ ವಿಡಿಯೋವನ್ನು ಪಿಟಿ ಉಷಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಮೈಲಿಗಲ್ಲು ಸಾಧಿಸಿದ ಮಹತ್ವದ ಕ್ಷಣ ಎಂದು ಬಣ್ಣಿಸಿದ್ದಾರೆ.
“ಫ್ರಾಂಕ್ಲಿನ್ ಡಿ. ರೂಸ್ವೆಲ್ಟ್ ಅವರು ಹೇಳಿದಂತೆ ‘ಮಹಾ ಶಕ್ತಿಯು ದೊಡ್ಡ ಜವಾಬ್ದಾರಿಯನ್ನು ಒಳಗೊಂಡಿರುತ್ತದೆ’ ಎಂದು ನಾನು ರಾಜ್ಯಸಭೆಯ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದಾಗ ನನಗೆ ಅನಿಸಿತು. ನನ್ನ ಜನರು ನನ್ನ ಮೇಲೆ ಇಟ್ಟಿರುವ ಭರವಸೆ ಮತ್ತು ನಂಬಿಕೆಯೊಂದಿಗೆ ನಾನು ಈ ಪ್ರಯಾಣವನ್ನು ಕೈಗೊಂಡಾಗ ಮೈಲಿಗಲ್ಲುಗಳನ್ನು ಸೃಷ್ಟಿಸಿದ ಭಾಸವಾಯಿತು” ಎಂದು ಒಕ್ಕಣೆ ಬರೆದಿದ್ದಾರೆ.
ಜುಲೈ 2022 ರಲ್ಲಿ ಬಿಜೆಪಿಯಿಂದ ಉಷಾ ಅವರು ಮೇಲ್ಮನೆಗೆ ನಾಮನಿರ್ದೇಶನಗೊಂಡಿದ್ದಾರೆ. ನವೆಂಬರ್ನಲ್ಲಿ ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷರಾಗಿ ಆಯ್ಕೆಯಾದರು.
ಅವರು ವೀಡಿಯೊಗೆ ನೆಟ್ಟಿಗರಿಂದ ಭಾರೀ ಪ್ರಶಂಸೆಗಳು ವ್ಯಕ್ತವಾಗಿದೆ, ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ.
ಪಯ್ಯೋಲಿ ಎಕ್ಸ್ಪ್ರೆಸ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಪಿಟಿ ಉಷಾ ಅವರು ಏಷ್ಯನ್ ಗೇಮ್ಸ್, ಏಷ್ಯನ್ ಚಾಂಪಿಯನ್ಶಿಪ್ಗಳು ಮತ್ತು ವಿಶ್ವ ಜೂನಿಯರ್ ಸೇರಿದಂತೆ ವಿವಿಧ ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾರತಕ್ಕಾಗಿ ಪದಕಗಳನ್ನು ಗೆದ್ದಿದ್ದಾರೆ. ಅವರು ತಮ್ಮ ವೃತ್ತಿಜೀವನದಲ್ಲಿ ಅನೇಕ ರಾಷ್ಟ್ರೀಯ ಮತ್ತು ಏಷ್ಯನ್ ದಾಖಲೆಗಳನ್ನು ಸ್ಥಾಪಿಸಿದ್ದಾರೆ.
"Great power involves great responsibility" as said by Franklin D. Roosevelt was felt by me when I chaired the Rajya Sabha session. I hope to create milestones as I undertake this journey with the trust and faith vested in me by my people.
🎥 @sansad_tv pic.twitter.com/bR8wKlOf21— P.T. USHA (@PTUshaOfficial) February 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.