ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಜೆಡಿಯು ಮುಖ್ಯಸ್ಥರು ಪ್ರತಿ ಮೂರು ವರ್ಷಗಳಿಗೊಮ್ಮೆ ಪ್ರಧಾನಿಯಾಗುವ ಕನಸು ಕಾಣುತ್ತಾರೆ. ಅವರಿಗೆ ಬಿಜೆಪಿ ಬಾಗಿಲು ಇನ್ನೆಂದೂ ತೆರೆಯುವುದಿಲ್ಲ ಎಂದಿದ್ದಾರೆ.
ತೇಜಸ್ವಿ ಯಾದವ್ ಅವರನ್ನು ಬಿಹಾರದ ಸಿಎಂ ಮಾಡಲು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ದೊಂದಿಗೆ ಸಹಿ ಹಾಕಿರುವ ರಹಸ್ಯ ಒಪ್ಪಂದದ ಬಗ್ಗೆ ಮಾತನಾಡುವಂತೆ ನಿತೀಶ್ ಕುಮಾರ್ ಅವರಿಗೆ ಶಾ ಸವಾಲೆಸೆದಿದ್ದಾರೆ.
ಪಶ್ಚಿಮ ಚಂಪಾರಣ್ನಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ಕೊಲೆ, ಕಳ್ಳತನ ಮತ್ತು ಅತ್ಯಾಚಾರ ಪ್ರಕರಣಗಳ ಹೆಚ್ಚಳದಿಂದ ಬಿಹಾರದ ಕಾನೂನು ಮತ್ತು ಸುವ್ಯವಸ್ಥೆ ಹದಗೆಡುತ್ತಿದೆ ಎಂದು ಹೇಳಿದರು.
ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಪಿಎಫ್ಐನಂತಹ ಸಂಘಟನೆಗಳು ಬಿಹಾರದಲ್ಲಿ ಹರಡಲು ಪ್ರಯತ್ನಿಸುತ್ತಿದ್ದವು, ಆದರೆ ನಿತೀಶ್ ಮೌನವಾಗಿದ್ದರು. ಪ್ರಧಾನಿ ಮೋದಿಯವರು ಪಿಎಫ್ಐ ಅನ್ನು ನಿಷೇಧಿಸಿ ಇಡೀ ದೇಶವನ್ನು ಸುಭದ್ರಗೊಳಿಸಿದ್ದಾರೆ ಎಂದು ಅವರು ಹೇಳಿದರು.
2022 ರಲ್ಲಿ ಬಿಜೆಪಿಯೊಂದಿಗಿನ ಸಂಬಂಧವನ್ನು ಕಡಿದುಕೊಂಡ ಸಿಎಂ ನಿತೀಶ್ ಅವವರಿಗೆ ತಕ್ಕ ಪಾಠ ಕಲಿಸಬೇಕೆಂದು ಬಿಹಾರದ ಜನರನ್ನು ಒತ್ತಾಯಿಸಿದರು. “ಬಿಹಾರದಲ್ಲಿ ಜಂಗಲ್ ರಾಜ್ ಅನ್ನು ಕೊನೆಗೊಳಿಸಲು ಏಕೈಕ ಮಾರ್ಗವೆಂದರೆ ಪ್ರಧಾನಿ ಮೋದಿಯನ್ನು ಗೆಲ್ಲಿಸುವುದು ಎಂದರು.
ನಿತೀಶ್ ಕುಮಾರ್ ಅವರು ಮೂರು ವರ್ಷಕ್ಕೊಮ್ಮೆ ಪ್ರಧಾನಿಯಾಗುವ ಕನಸು ಕಾಣುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.