ಹೈದರಾಬಾದ್: ಆಂಧ್ರಪ್ರದೇಶದ ಎಲ್ಲಾ 26 ಜಿಲ್ಲೆಗಳು ಕನಿಷ್ಠ ಒಂದು ಹಿಂದೂ ದೇವಾಲಯವನ್ನು ಹೊಂದಿರುವುದನ್ನು ಖಚಿತಪಡಿಸಲು ಸರ್ಕಾರ ಪ್ರಯತ್ನಗಳನ್ನು ಆರಂಭಿಸಿದೆ. ಆಡಳಿತದ ಪ್ರಕಾರ, ರಾಜ್ಯದ ಪ್ರತಿ ಹಳ್ಳಿಯಲ್ಲಿ ದೇವಾಲಯಗಳನ್ನು ನಿರ್ಮಿಸಲು ಅಲ್ಲಿನ ಸರ್ಕಾರ ಮುಂದಾಗಿದೆ.
ಉಪಮುಖ್ಯಮಂತ್ರಿ ಕೊಟ್ಟು ಸತ್ಯನಾರಾಯಣ ಅವರ ಪ್ರಕಾರ, ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಆದೇಶದ ಮೇರೆಗೆ ರಾಜ್ಯಾದ್ಯಂತ ‘ಹಿಂದೂ ನಂಬಿಕೆಯನ್ನು ರಕ್ಷಿಸುವ ಮತ್ತು ಹರಡುವ’ ಪ್ರಯತ್ನವನ್ನು ಪ್ರಾರಂಭಿಸಲಾಗಿದೆ ಮತ್ತು ಮುಂಬರುವ ವರ್ಷಗಳಲ್ಲಿ ರಾಜ್ಯವು 3000 ದೇವಾಲಯಗಳನ್ನು ನಿರ್ಮಿಸಲಿದೆ ಎಂದಿದ್ದಾರೆ.
ಹಿಂದೂ ನಂಬಿಕೆಯನ್ನು ಬೃಹತ್ ಪ್ರಮಾಣದಲ್ಲಿ ರಕ್ಷಿಸಲು ಮತ್ತು ಪ್ರಚಾರ ಮಾಡಲು, ದುರ್ಬಲ ವರ್ಗಗಳ ಪ್ರದೇಶಗಳಲ್ಲಿ ಹಿಂದೂ ದೇವಾಲಯಗಳ ನಿರ್ಮಾಣವನ್ನು ಪ್ರಾರಂಭಿಸಲಾಗಿದೆ ಎಂದಿದ್ದಾರೆ.
ಭಾರತದ ವಿವಿಧ ಸ್ಥಳಗಳಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಗಳನ್ನು ನಿರ್ಮಿಸಲು ಸ್ಥಾಪಿಸಲಾದ ತಿರುಮಲ ತಿರುಪತಿ ದೇವಸ್ಥಾನದ ಶ್ರೀ ವಾಣಿ ಟ್ರಸ್ಟ್ ಪ್ರತಿ ದೇವಾಲಯದ ನಿರ್ಮಾಣಕ್ಕೆ 10 ಲಕ್ಷ ರೂ ವಿನಿಯೋಗಿಸುತ್ತಿದೆ.
ಧಾರ್ಮಿಕ ದತ್ತಿ ಇಲಾಖೆಯು 978 ದೇವಾಲಯಗಳ ನಿರ್ಮಾಣದ ಉಸ್ತುವಾರಿ ವಹಿಸಿಕೊಂಡಿದೆ ಮತ್ತು ಕೆಲಸವು ತ್ವರಿತ ಗತಿಯಲ್ಲಿ ಸಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ. ಇದಲ್ಲದೇ ದೇವಸ್ಥಾನಗಳ ಜೀರ್ಣೋದ್ಧಾರ ಹಾಗೂ ಕಾರ್ಯಕ್ರಮಗಳನ್ನು ನಡೆಸಲು ರಾಜ್ಯ ಸರ್ಕಾರ 270 ಕೋಟಿ ರೂ ಮೀಸಲಿಟ್ಟಿದೆ. ಇದರಲ್ಲಿ 238 ಕೋಟಿ ರೂಪಾಯಿಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.