News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸೋಲಿನ ಹತಾಶೆಯಿಂದ ವಿದೇಶದಲ್ಲಿ ಭಾರತದ ವಿರುದ್ಧ ರಾಹುಲ್‌ ಹೇಳಿಕೆ: ಠಾಕೂರ್

ನವದೆಹಲಿ: ರಾಹುಲ್ ಗಾಂಧಿ ತಮ್ಮ ವೈಫಲ್ಯಗಳನ್ನು ಮರೆಮಾಚಲು ವಿದೇಶಗಳಲ್ಲಿ ಭಾರತವನ್ನು ದೂಷಿಸುತ್ತಿದ್ದಾರೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಹೇಳಿದ್ದಾರೆ.

ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ  ಠಾಕೂರ್ ಅವರು, ಪೂರ್ವ ಯೋಜಿತ ರೀತಿಯಲ್ಲಿ ಭಾರತವನ್ನು ದೂಷಿಸಲು ರಾಹುಲ್ ಒಪ್ಪಂದ ಮಾಡಿಕೊಂಡಿದ್ದಾರೆ. ಅವರ ಭಾಷೆ, ಚಿಂತನೆ, ಕಾರ್ಯ ವೈಖರಿ ಅನುಮಾನಾಸ್ಪದವಾಗಿದೆ ಎಂದಿದ್ದಾರೆ.

ಠಾಕೂರ್ ಅವರು ಭಾರತದ ಬಗ್ಗೆ ಪದೇ ಪದೇ ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ ಮತ್ತು ಕೋವಿಡ್ ಸಾಂಕ್ರಾಮಿಕ ಸಮಯದಲ್ಲೂ ಅವರು ಸರ್ಕಾರದ ಮೇಲೆ ಪ್ರಶ್ನೆಗಳನ್ನು ಎತ್ತಿದ್ದರು. ಅಲ್ಲದೇ ಜಾಗತಿಕ ಮಟ್ಟದಲ್ಲಿ ಭಾರತದ ಗೌರವಕ್ಕೆ ಧಕ್ಕೆ ತರುವ ಪ್ರಯತ್ನ ಮಾಡಿದ್ದರು ಎಂದಿದ್ದಾರೆ.

ಭಾರತೀಯ ಚುನಾವಣೆಗಳಲ್ಲಿ ನಿರಂತರವಾಗಿ ಸೋಲು ಕಾಣುತ್ತಿರುವುದರಿಂದ ಹತಾಶರಾಗಿ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್‌ ದೇಶದಲ್ಲಿ ಸೋಲುತ್ತಿದೆ ಎಂದರೆ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದರ್ಥವಲ್ಲ ಎಂದಿದ್ದಾರೆ.

ಕ್ಯಾಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಇತ್ತೀಚಿಗೆ ಮಾತನಾಡಿದ್ದ ರಾಹುಲ್‌ ಗಾಂಧಿ,  ಭಾರತೀಯ ಪ್ರಜಾಪ್ರಭುತ್ವವು ಅಪಾಯದಲ್ಲಿದೆ ಮತ್ತು ತಾವು ಸೇರಿದಂತೆ ಹಲವಾರು ರಾಜಕಾರಣಿಗಳು ಇಸ್ರೇಲಿ ಸ್ಪೈವೇರ್ ಪೆಗಾಸಸ್ ಮೂಲಕ ಕಣ್ಗಾವಲಿನಲ್ಲಿದ್ದೇವೆ ಎಂದು ಹೇಳಿದ್ದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top