ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ದೇಶವನ್ನು ವಿಭಜಿಸುವ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿರುವ ವಯನಾಡ್ ಸಂಸದರು ರಾಷ್ಟ್ರೀಯ ಏಕತೆಗೆ ಅತ್ಯಂತ ಅಪಾಯಕಾರಿ ಎಂದು ಹೇಳಿದ್ದಾರೆ.
ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವನ್ನು ಟೀಕಿಸುವ ಭರದಲ್ಲಿ ರಾಹುಲ್ ಗಾಂಧಿ ಅವರು ಲಂಡನ್ನಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆಗಳನ್ನು ಉಲ್ಲೇಖಿಸಿ ರಿಜ್ಜು ಈ ಪ್ರತಿಕ್ರಿಯೆ ನೀಡಿದ್ದಾರೆ.
ಟ್ವಿಟ್ ಮಾಡಿರುವ ರಿಜ್ಜು, “ಸ್ವಯಂ ಘೋಷಿತ ಕಾಂಗ್ರೆಸ್ ರಾಜಕುಮಾರ ಎಲ್ಲಾ ಮಿತಿಗಳನ್ನು ದಾಟಿದ್ದಾರೆ. ಭಾರತದ ಜನರು ರಾಹುಲ್ ಗಾಂಧಿಯನ್ನು ‘ಪಪ್ಪು’ ಎಂದು ತಿಳಿದಿದ್ದಾರೆ ಆದರೆ ವಿದೇಶಿಯರಿಗೆ ಅವರು ನಿಜವಾಗಿ ‘ಪಪ್ಪು’ ಎಂದು ತಿಳಿದಿಲ್ಲ ಮತ್ತು ಅವರ ಮೂರ್ಖ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದು ಅನಿವಾರ್ಯವಲ್ಲ ಆದರೆ ಸಮಸ್ಯೆಯೆಂದರೆ ಅವರ ಭಾರತ ವಿರೋಧಿ ಹೇಳಿಕೆಗಳನ್ನು ಭಾರತ ವಿರೋಧಿ ಪಡೆಗಳು ಭಾರತದ ಇಮೇಜ್ ಅನ್ನು ಕಳಂಕಗೊಳಿಸಲು ದುರುಪಯೋಗಪಡಿಸಿಕೊಂಡಿವೆ” ಎಂದಿದ್ದಾರೆ.
ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣದ ವೀಡಿಯೊವನ್ನು ಕೇಂದ್ರ ಸಚಿವರು ಹಂಚಿಕೊಂಡಿದ್ದಾರೆ, ಈ ವಿಡಿಯೋದಲ್ಲಿ ಅವರು ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶಪಡಿಸಿದ್ದಾರೆ ಎಂದು ಪ್ರಧಾನಿ ಮೋದಿಯನ್ನು ಟೀಕಿಸುವುದನ್ನು ಕಾಣಬಹುದು.
This self declared Congress Prince has crossed all the limits. This man has become extremely dangerous for India's unity. Now he's provoking people to divide India. India's most popular & loved Hon Prime Minister @Narendramodi Ji's only mantra is 'Ek Bharat Shreshtha Bharat'. pic.twitter.com/8LKRybLAZW
— Kiren Rijiju (@KirenRijiju) March 8, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.