ನವದೆಹಲಿ: ರಾಜ್ಯಸಭಾ ಸಭಾಪತಿ ಜಗದೀಪ್ ಧನಖರ್ ಅವರು ಸದನದ ಸುವ್ಯವಸ್ಥಿತ ಕಾರ್ಯನಿರ್ವಹಣೆಯನ್ನು ಭದ್ರಪಡಿಸುವ ಕುರಿತು ಚರ್ಚಿಸಲು ಇಂದು ವಿವಿಧ ರಾಜಕೀಯ ಪಕ್ಷಗಳ ನಾಯಕರ ಸಭೆಯನ್ನು ಕರೆದಿದ್ದಾರೆ.
ಆಡಳಿತಗಳು ಮತ್ತು ವಿರೋಧ ಪಕ್ಷಗಳು ತಾವು ಪ್ರಸ್ತಾಪಿಸಿದ ವಿಷಯಗಳ ಬಗ್ಗೆ ಸದನದಲ್ಲಿ ಗದ್ದಲವನ್ನು ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಪರಿಪಡಿಸಲು ಸಭಾಪತಿ ಸಭೆಯಲ್ಲಿ ಪರಿಹಾರವನ್ನು ಕಂಡುಕೊಳ್ಳಲು ಪ್ರಯತ್ನಿಸುತ್ತಾರೆ ಎಂದು ಹೇಳಲಾಗಿದೆ.
ಈ ತಿಂಗಳ 13 ರಂದು ಬಜೆಟ್ ಅಧಿವೇಶನದ ಎರಡನೇ ಭಾಗದ ಆರಂಭದಿಂದಲೂ ಸಂಸತ್ತಿನಲ್ಲಿ ನಿರಂತರ ಗದ್ದಲ ಏರ್ಪಡುತ್ತಿವೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಪ್ರಜಾಪ್ರಭುತ್ವದ ಬಗ್ಗೆ ಮಾಡಿದ ಹೇಳಿಕೆಗೆ ಕ್ಷಮೆಯಾಚಿಸಬೇಕೆಂದು ಬಿಜೆಪಿ ಒತ್ತಾಯಿಸುತ್ತಿದ್ದರೆ, ವಿರೋಧ ಪಕ್ಷಗಳು ಅದಾನಿ ಗ್ರೂಪ್ ವಿಚಾರದಲ್ಲಿ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸುತ್ತಿವೆ.
ಮಂಗಳವಾರ ಕೂಡ ರಾಜ್ಯಸಭಾ ಅಧ್ಯಕ್ಷರು ಮೇಲ್ಮನೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರ ಎರಡು ಸಭೆಗಳನ್ನು ಕರೆದು, ಆಡಳಿತ ಮತ್ತು ವಿರೋಧ ಪಕ್ಷಗಳು ಎತ್ತಿರುವ ವಿಷಯಗಳ ಬಗ್ಗೆ ಸದನದಲ್ಲಿ ಏರ್ಪಟ್ಟಿರುವ ಗದ್ದಲವನ್ನು ನಿಲ್ಲಿಸುವ ಪ್ರಯತ್ನ ನಡೆಸಿದ್ದರು. ಇದೀಗ ಮತ್ತೊಮ್ಮೆ ಅವರು ಸಭೆ ಕರೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.