ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಧ್ಯಪ್ರದೇಶದ ರಾಣಿ ಕಮಲಾಪತಿ ರೈಲು ನಿಲ್ದಾಣದಿಂದ ಭೋಪಾಲ್-ನವದೆಹಲಿ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಿದರು. ಹೊಸ ರೈಲು ಮಧ್ಯಪ್ರದೇಶದ ರಾಣಿ ಕಮಲಾಪತಿ ರೈಲು ನಿಲ್ದಾಣ ಮತ್ತು ದೆಹಲಿಯ ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣದ ನಡುವೆ ಓಡಲಿದೆ.
ಇದು ದೇಶದ 11ನೇ ವಂದೇ ಭಾರತ್ ರೈಲು. ರೈಲು 7 ಗಂಟೆ 30 ನಿಮಿಷಗಳಲ್ಲಿ 701 ಕಿಲೋಮೀಟರ್ ದೂರವನ್ನು ಕ್ರಮಿಸುತ್ತದೆ ಮತ್ತು ಶನಿವಾರ ಹೊರತುಪಡಿಸಿ ಎಲ್ಲಾ ದಿನಗಳಲ್ಲಿ ಚಲಿಸುತ್ತದೆ. ಇದು ವೀರಾಂಗನಾ ಲಕ್ಷ್ಮೀಬಾಯಿ ಝಾನ್ಸಿ, ಗ್ವಾಲಿಯರ್ ಮತ್ತು ಆಗ್ರಾದಲ್ಲಿ ನಿಲುಗಡೆಗಳನ್ನು ಹೊಂದಿರುತ್ತದೆ. ನಾಳೆಯಿಂದ ಸಾಮಾನ್ಯ ಪ್ರಯಾಣಿಕರಿಗಾಗಿ ವಂದೇ ಭಾರತ್ ರೈಲು ಆರಂಭವಾಗಲಿದೆ.
ಮಧ್ಯಪ್ರದೇಶದ ರಾಣಿ ಕಮಲಪತಿ ರೈಲು ನಿಲ್ದಾಣದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಮೋದಿ, ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ನವ ಭಾರತದ ಸಾಮರ್ಥ್ಯ, ಪ್ರಮಾಣ ಮತ್ತು ವೇಗಕ್ಕೆ ಉಜ್ವಲ ಉದಾಹರಣೆಯಾಗಿದೆ. ಇದು ಪ್ರವಾಸೋದ್ಯಮ ಮತ್ತು ಉದ್ಯೋಗಕ್ಕೂ ಉತ್ತೇಜನ ನೀಡುತ್ತದೆ ಎಂದು ಅವರು ಹೇಳಿದರು.
ವಂದೇ ಭಾರತ್ ರೈಲು ರಾಷ್ಟ್ರದ ಕೌಶಲ್ಯ, ಸಾಮರ್ಥ್ಯ ಮತ್ತು ಆತ್ಮವಿಶ್ವಾಸವನ್ನು ಪ್ರದರ್ಶಿಸಿದೆ ಎಂದು ಪ್ರಧಾನಿ ಹೇಳಿದರು. ಕಳೆದ ಒಂಬತ್ತು ವರ್ಷಗಳಲ್ಲಿ ಸರ್ಕಾರದ ನಿರಂತರ ಪ್ರಯತ್ನಗಳು ಭಾರತೀಯ ರೈಲ್ವೇಯನ್ನು ವಿಶ್ವದಲ್ಲೇ ಸುರಕ್ಷಿತ ಮತ್ತು ಅತ್ಯಂತ ಪರಿಣಾಮಕಾರಿ ರೈಲ್ವೇ ನೆಟ್ವರ್ಕ್ ಆಗಿ ಮಾಡುತ್ತಿದೆ ಎಂದು ಅವರು ಹೇಳಿದರು. ದೇಶಾದ್ಯಂತ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಭಾರಿ ಬೇಡಿಕೆ ಇದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.