ನವದೆಹಲಿ: ಕಳೆದ 11 ತಿಂಗಳಲ್ಲಿ ಮಿಷನ್ ಅಮೃತ್ ಸರೋವರದಡಿಯಲ್ಲಿ ಸುಮಾರು 40,000 ಜಲಮೂಲಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ದಿಕ್ಕಿನಲ್ಲಿ ಕೆಲಸ ಮಾಡುವ ವೇಗವು ನಮ್ಮ ‘ಅಮೃತ ಕಾಲ’ ಸಂಕಲ್ಪಗಳಿಗೆ ಹೊಸ ಶಕ್ತಿಯನ್ನು ತುಂಬುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕಳೆದ 11 ತಿಂಗಳಲ್ಲಿ ಮಿಷನ್ ಅಡಿಯಲ್ಲಿ ಸುಮಾರು 40,000 ಜಲಮೂಲಗಳನ್ನು ಅಭಿವೃದ್ಧಿಪಡಿಸಲಾಗಿದೆ, ಈ ಯೋಜನೆಯಡಿಯಲ್ಲಿ ಸುಮಾರು 80 ಪ್ರತಿಶತದಷ್ಟು ಗುರಿಯನ್ನು ಸಾಧಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ.
ಮಿಷನ್ ಅಮೃತ್ ಸರೋವರ್ ತನ್ನ ಗುರಿಯನ್ನು ಸಾಧಿಸುವತ್ತ ಸಾಗುತ್ತಿದೆ ಎಂದು ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಟ್ವೀಟ್ ಮಾಡಿದ್ದಾರೆ.
”40,000ಕ್ಕೂ ಹೆಚ್ಚು ಅಮೃತ ಸರೋವರಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಾಗಿದೆ. 2023ರ ಆಗಸ್ಟ್ 15ರೊಳಗೆ 50,000 ಅಮೃತ್ ಸರೋವರಗಳನ್ನು ನಿರ್ಮಿಸುವ ಗುರಿ ಇದೆ’’ ಎಂದಿದ್ದಾರೆ.
ಶೇಖಾವತ್ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿದ ಮೋದಿ, ”ಅನಂತ ಅಭಿನಂದನೆಗಳು! ದೇಶಾದ್ಯಂತ ‘ಅಮೃತ್ ಸರೋವರಗಳು’ ನಿರ್ಮಾಣವಾಗುತ್ತಿರುವ ವೇಗವು ನಮ್ಮ ‘ಅಮೃತ್ ಕಾಲ’ ನಿರ್ಣಯಗಳಲ್ಲಿ ಹೊಸ ಶಕ್ತಿಯನ್ನು ತುಂಬುತ್ತಿದೆ” ಎಂದಿದ್ದಾರೆ.
ಯೋಜನೆಯಡಿಯಲ್ಲಿ ಅಭಿವೃದ್ಧಿಪಡಿಸಲಿರುವ ಒಟ್ಟು ಅಮೃತ್ ಸರೋವರಗಳ ಸಂಖ್ಯೆ ಸುಮಾರು 50,000 ಆಗಿದ್ದು, ಈ ವರ್ಷ ಆಗಸ್ಟ್ 15 ರೊಳಗೆ ಪೂರ್ಣಗೊಳ್ಳಲಿದೆ.
बहुत-बहुत बधाई! जिस तेजी से देशभर में अमृत सरोवरों का निर्माण हो रहा है, वो अमृतकाल के हमारे संकल्पों में नई ऊर्जा भरने वाली है। https://t.co/fdox1ia77m
— Narendra Modi (@narendramodi) April 5, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.