ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಚುನಾವಣಾ ಬತ್ತಳಿಕೆಯಲ್ಲಿ ಅಸ್ತ್ರಗಳೇ ಉಳಿದಿಲ್ಲ ಎಂದು ಎಸ್.ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾಧಿ ನಾರಾಯಣಸ್ವಾಮಿ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದೇ ಕಾರಣಕ್ಕೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಅಮುಲ್-ನಂದಿನಿ ವಿಲೀನ ಎಂಬ ಸುಳ್ಳು ವಿಚಾರವನ್ನು ಚುನಾವಣಾ ಅಸ್ರ್ತವಾಗಿ ಮುಂದುವರೆಸಿದ್ದಾರೆ. ಅದರೆ ಇದು ಫ್ಲಾಪ್ ಷೋ ಎಂದು ಟೀಕಿಸಿದರು.
ಈ ಎರಡು ಪಕ್ಷಗಳಿಗೂ ಚುನಾವಣೆ ಎದುರಿಸಲು ವಿಷಯಗಳೇ ಉಳಿದಿಲ್ಲ ಎಂದು ಆರೋಪಿಸಿದರು. ಕೆಲವು ಸಮಯದ ಹಿಂದೆ ಕೇಂದ್ರ ಮತ್ತು ಗೃಹ ಸಹಕಾರ ಸಚಿವ ಅಮಿತ್ ಶಾ ಅವರು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದರು. ಆಗ ಅವರು ತಮ್ಮ ಭಾಷಣದಲ್ಲಿ ಅಮುಲ್-ನಂದಿನಿ ನಡುವಿನ ತಾಂತ್ರಿಕ ಹಾಗೂ ಮಾರುಕಟ್ಟೆ ಸಹಕಾರದ ವಿಚಾರವಾಗಿ ಪ್ರಸ್ತಾಪಿಸಿದ್ದರು. ಇದರಿಂದ ನಂದಿನಿ ಸಂಸ್ಥೆ ಇನ್ನಷ್ಟು ವಿಶಾಲವಾಗಿ ಬೆಳೆಯಬೇಕೆಂಬ ಆಶಯ ವ್ಯಕ್ತಪಡಿಸಿದ್ದರು. ಆಗ ಸುಮ್ಮನೆ ಇದ್ದ ಕಾಂಗ್ರೆಸ್-ಜೆಡಿಎಸ್ ನಾಯಕರು ಇದೀಗ ಅದೇ ವಿಚಾರವನ್ನು ತಿರುಚಿ ಚುನಾವಣಾ ಅಸ್ರ್ತವಾಗಿ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಅಕ್ಷೇಪಿಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಹುನ್ನಾರ ಜನತೆಗೆ ಅರ್ಥವಾಗಿದೆ. ಆದ್ದರಿಂದ ಜನರು ಇವರೆಡು ಪಕ್ಷಗಳ ಹೇಳಿಕೆಗೆ ಸ್ಪಂದಿಸುತ್ತಿಲ್ಲ. ಕೆಲ ಸಂಘಟನೆಗಳನ್ನು ಎತ್ತಿ ಕಟ್ಟುವ ಪ್ರಯತ್ನ ಮಾಡಿದ್ದರೂ ಅದು ಫಲ ಕೊಡುತ್ತಿಲ್ಲ ಎಂದು ಅವರು ತಿಳಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಕಟ್ಟಡವು, ಬಿಜೆಪಿ ಚಿಹ್ನೆಯಾದ ಕಮಲದ ಅಕಾರದಲ್ಲಿದ್ದು ಅದನ್ನು ಮುಚ್ಚುವಂತೆ ಕಾಂಗ್ರೆಸ್ಸಿಗರು ಒತ್ತಾಯಿಸಿದ್ದಾರೆ. ಹಾಗಿದ್ದರೆ ಕಾಂಗ್ರೆಸ್ ಚಿಹ್ನೆಯಾದ ಎರಡು ಕೈಗಳನ್ನು (ಹಸ್ತ) ಮುಚ್ಚಲು ಸಾಧ್ಯವೇ? ಇದಕ್ಕೆ ಕಾಂಗ್ರೆಸ್ ಮುಖಂಡರು ಇದಕ್ಕೆ ಉತ್ತರ ಹೇಳಬೇಕು ಎಂದು ಸವಾಲೆಸೆದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.