ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿ ಸಪ್ತಾಹವನ್ನು ಉದ್ಘಾಟಿಸಿದರು ಮತ್ತು ನವದೆಹಲಿಯಲ್ಲಿ ನಡೆದ ‘ಪಂಚಾಯತ್ಗಳ ಪ್ರೋತ್ಸಾಹದ ರಾಷ್ಟ್ರೀಯ ಸಮ್ಮೇಳನ ಮತ್ತು ಪ್ರಶಸ್ತಿ ಸಮಾರಂಭ’ದಲ್ಲಿ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಮುರ್ಮು, ಗ್ರಾಮಗಳು ಇಡೀ ದೇಶದ ಅಭಿವೃದ್ಧಿಗೆ ಮೂಲ ಘಟಕಗಳಾಗಿದ್ದು, ಮೊದಲು ಅಭಿವೃದ್ಧಿ ಹೊಂದಬೇಕು. ಗ್ರಾಮಸ್ಥರು ತಮ್ಮ ಗ್ರಾಮವನ್ನು ಅವರ ಆಯ್ಕೆಯಂತೆ ಅಭಿವೃದ್ಧಿಪಡಿಸುವ ಹಕ್ಕನ್ನು ಹೊಂದಿರಬೇಕು ಎಂದು ಹೇಳಿದರು.
ಮಹಿಳೆಯರ ಶ್ರಮವನ್ನು ಶ್ಲಾಘಿಸಿದ ರಾಷ್ಟ್ರಪತಿಗಳು, ಮಹಿಳೆಯರ ಸಹಭಾಗಿತ್ವದಿಂದ ಮಾತ್ರ ಸಮಾಜದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದರು. ಗ್ರಾಮಗಳಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವತ್ತ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.
ಏಪ್ರಿಲ್ 24ರ ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಪೂರ್ವಭಾವಿಯಾಗಿ ಆಜಾದಿ ಕಾ ಅಮೃತ್ ಮಹೋತ್ಸವ 2.0 ರ ಭಾಗವಾಗಿ ಪಂಚಾಯತ್ ರಾಜ್ ಸಚಿವಾಲಯವು ಇಂದಿನಿಂದ ಈ ತಿಂಗಳ 21 ರವರೆಗೆ ರಾಷ್ಟ್ರೀಯ ಪಂಚಾಯತ್ ಪ್ರಶಸ್ತಿಗಳ ಸಪ್ತಾಹವನ್ನು ಆಚರಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.