ಲಕ್ನೋ: ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಮತ್ತು ಆತನ ಸಹೋದರ ಅಶ್ರಫ್ ಹತ್ಯೆಯ ತನಿಖೆಗಾಗಿ ಉತ್ತರ ಪ್ರದೇಶ ಪೊಲೀಸರು ಮೂವರು ಸದಸ್ಯರ ಎರಡು ವಿಶೇಷ ಕಾರ್ಯಪಡೆ (ಎಸ್ಐಟಿ)ಗಳನ್ನು ರಚಿಸಿದ್ದಾರೆ. ಶನಿವಾರ ಪ್ರಯಾಗ್ರಾಜ್ನಲ್ಲಿ ಮೂವರು ದುಷ್ಕರ್ಮಿಗಳು ಮಾಧ್ಯಮದವರಂತೆ ನಟಿಸಿ ಈ ಹತ್ಯೆ ಮಾಡಿದ್ದರು.
ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಆರ್ಕೆ ವಿಶ್ವಕರ್ಮ ನೀಡಿದ ಹೇಳಿಕೆಯ ಪ್ರಕಾರ, ಪ್ರಯಾಗ್ರಾಜ್ ಪೊಲೀಸ್ ಆಯುಕ್ತರ ಸೂಚನೆಯ ಮೇರೆಗೆ ಎಸ್ಐಟಿ ರಚಿಸಲಾಗಿದೆ. ಪ್ರಾಮಾಣಿಕ ತನಿಖೆ ಮತ್ತು ಕಾಲಮಿತಿಯ ಕ್ರಮವನ್ನು ಖಚಿತಪಡಿಸಿಕೊಳ್ಳಲು, ಮೂರು ಸದಸ್ಯರ ಮೇಲ್ವಿಚಾರಕರ ತಂಡವನ್ನು ಸಹ ರಚಿಸಲಾಗಿದೆ.
ಇಬ್ಬರು ಗ್ಯಾಂಗ್ಸ್ಟರ್ಗಳ ಹತ್ಯೆಯ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಬಿಗಿ ಕಣ್ಗಾವಲು ಇರಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಧಕ್ಕೆ ಬರದಂತೆ ಮುಂಜಾಗ್ರತೆ ವಹಿಸಲಾಗಿದೆ. ಈ ಸಂಬಂಧ ನಿನ್ನೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಭೆಯನ್ನೂ ನಡೆಸಿದ್ದಾರೆ.
Two SITs have been constituted to investigate the killings of gangster-turned politician Atiq Ahmed and his brother Ashraf in Prayagraj, UP
A three-member SIT, headed by ADG Prayagraj zone Bhanu Bhaskar, including CP Prayagraj and Director FSL has been formed by DGP RK… pic.twitter.com/sbGje6Nj8I
— ANI (@ANI) April 17, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.