ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ನಡೆಸಲ್ಪಡುವ ಸಂಸ್ಥೆಗಳಲ್ಲಿ ಓದುತ್ತಿರುವ ಹನ್ನೆರಡು ವಿದ್ಯಾರ್ಥಿಗಳು ಈ ವರ್ಷ UPSC ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ, ಅವರಲ್ಲಿ ಒಬ್ಬರು ಟಾಪ್ 20ರಲ್ಲಿ ಸ್ಥಾನ ಗಳಿಸಿದ್ದಾರೆ. ಕಾನ್ಪುರದ ಸಂಘ-ಚಾಲಿತ ಬಿಎನ್ಎಸ್ಡಿ ಶಿಕ್ಷಾ ನಿಕೇತನ ವಿದ್ಯಾರ್ಥಿನಿ ಕೃತಿಕಾ ಮಿಶ್ರಾ ಪರೀಕ್ಷೆಯಲ್ಲಿ 66ನೇ ರ್ಯಾಂಕ್ ಗಳಿಸಿದ್ದಾರೆ. ಈ ಸಾಧನೆಯ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಡಿದ ಮಾತುಗಳು ಸುಳ್ಳು ಎಂದು ಸಾಬೀತಾಗಿದೆ.
“ಪಾಕಿಸ್ತಾನದಲ್ಲಿ ಮೂಲಭೂತವಾದಿ ಇಸ್ಲಾಮಿಸ್ಟ್ಗಳು ತಮ್ಮ ಮದರಸಾಗಳನ್ನು ಬಳಸುತ್ತಿರುವಂತೆಯೇ, ಆರ್ಎಸ್ಎಸ್ ತನ್ನ ಶಾಲೆಗಳನ್ನು ನಿರ್ದಿಷ್ಟ ದೃಷ್ಟಿಕೋನವನ್ನು ಉತ್ತೇಜಿಸಲು ಬಳಸುತ್ತಿದೆ. ಆರ್ಎಸ್ಎಸ್ಗೆ ಹಣ ಎಲ್ಲಿಂದ ಬರುತ್ತದೆ? ಎಂಬ ಪ್ರಶ್ನೆಯನ್ನು ಯಾರೂ ಕೇಳುವುದಿಲ್ಲ” ಎಂದು ಖ್ಯಾತ ಅರ್ಥಶಾಸ್ತ್ರಜ್ಞ ಕೌಶಿಕ್ ಬಸು ಅವರೊಂದಿಗಿನ ಸಂವಾದದ ವೇಳೆ ರಾಹುಲ್ ಗಾಂಧಿ ಹೇಳಿದ್ದಾರೆ.
ಆದರೆ ವಿದ್ಯಾ ಭಾರತಿಯ ಶಿಕ್ಷಣ ಸಂಸ್ಥೆಗಳಲ್ಲಿ ಕಲಿತ ವಿದ್ಯಾರ್ಥಿಗಳು ಮಾಡಿದ ಸಾಧನೆಯ ಬಗ್ಗೆ ರಾಹುಲ್ ತುಟಿ ಪಿಟಿಕ್ ಅನ್ನುತ್ತಿಲ್ಲ. ಇದು ಅವರ ರೋಗ ಗ್ರಸ್ಥ ಮನಸ್ಥಿತಿಯನ್ನು ಪ್ರದರ್ಶಿಸುತ್ತದೆ.
“ಸಮಾನತೆಯ ಕಲ್ಪನೆಯ ಮೇಲಿನ ದಾಳಿಯು ಮೂಲಭೂತವಾಗಿ ನಡೆಯುತ್ತಿದೆ. ಮತ್ತು ಆರೆಸ್ಸೆಸ್ ತಮ್ಮ ಶಾಲೆಗಳ ಮೂಲಕ ದಾಳಿಯನ್ನು ಪ್ರಾರಂಭಿಸಿತು” ಎಂದು ರಾಹುಲ್ ಹೇಳಿದ್ದರು.
ರಾಹುಲ್ ಗಾಂಧಿಯವರ ಹೇಳಿಕೆಗೆ ಪ್ರತಿಕ್ರಿಯಿಸಿರು ಬಿಜೆಪಿ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಅನ್ನು ವಿಶ್ವದ ಅತಿದೊಡ್ಡ ದೇಶಭಕ್ತಿಯ ಶಾಲೆ ಎಂದು ಶ್ಲಾಘಿಸಿದೆ. ಹಿಂದುತ್ವ ಸಂಘಟನೆಯನ್ನು ಪಾಕಿಸ್ತಾನದ ತೀವ್ರಗಾಮಿ ಇಸ್ಲಾಮಿಸ್ಟ್ ಸಂಘಟನೆಗಳಿಗೆ ಹೋಲಿಸಿದ್ದಕ್ಕಾಗಿ ರಾಹುಲ್ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದೆ. ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಚಿಲುಮೆಯಾದ ಆರ್ಎಸ್ಎಸ್ ಅನ್ನು ಅರ್ಥಮಾಡಿಕೊಳ್ಳಲು ಕಾಂಗ್ರೆಸ್ ನಾಯಕರಿಗೆ ಬಹಳ ಸಮಯ ಬೇಕಾಗುತ್ತದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.