ಮಂಗಳೂರು: ಪದವೀಧರರು ಉದ್ಯೋಗಕ್ಕೆ ಸೇರುವ ಸಂದರ್ಭ ಸಲ್ಲಿಸುವ ಅಂಕಪಟ್ಟಿಯ ಪರಿಶೀಲನೆ (ವೆರಿಫಿಕೇಶನ್) ಕಡ್ಡಾಯ. ಆದರೆ ಅಂಕಪಟ್ಟಿ ಪರಿಶೀಲನೆಗೆ ಮಂಗಳೂರು ವಿ.ವಿ.ಯ ವಿದ್ಯಾರ್ಥಿಗಳು ದುಬಾರಿ ಶುಲ್ಕ ತೆರಬೇಕಾಗಿದ್ದು, ಇದನ್ನು ಇಳಿಸಲು ಕ್ರಮ ಕೈಗೊಳ್ಳಬೇಕು ಎಂದು ವಿ.ವಿ.ಯ ಉಪಕುಲಪತಿಗಳಿಗೆ ನೂತನ ಶಾಸಕ ಬೈಂದೂರಿನ ಗುರುರಾಜ್ ಗಂಟೆಹೊಳೆ ಟ್ವಿಟ್ ಮೂಲಕ ಮನವಿ ಮಾಡಿದ್ದರು, ಈ ಮನವಿಗೆ ಮಂಗಳೂರು ವಿ.ವಿ. ಸ್ಪಂದಿಸಿದೆ.
ಪದವೀಧರ ತನ್ನ 6 ಸೆಮಿಸ್ಟರ್ಗಳ ಅಂಕಪಟ್ಟಿಗಳನ್ನು ಪರಿಶೀಲಿಸಲು 9 ಸಾವಿರ ರೂ. ಮೂಲ ಶುಲ್ಕ ಹಾಗೂ ಇತರ ಶುಲ್ಕ ಸೇರಿ ಒಟ್ಟು 10,800 ರೂ. ಪಾವತಿಸಬೇಕಾಗುತ್ತದೆ. ಇದು ಮಂಗಳೂರು ವಿ.ವಿ.ಯಲ್ಲಿ ಕಲಿತ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅದರಲ್ಲೂ ಪ್ರಮುಖವಾಗಿ ಗ್ರಾಮಾಂತರ ಪ್ರದೇಶದ ಬಡ ಮಕ್ಕಳಿಗೆ ಹೊರೆಯಾಗಿತ್ತು. ತುಮಕೂರು ರಾಜ್ಯದಲ್ಲಿಯೇ 6 ವಿಷಯಗಳ ಅಂಕಪಟ್ಟಿಗೆ ಕೇವಲ 501 ರೂ. ಶುಲ್ಕವನ್ನಷ್ಟೇ ತೆಗೆದುಕೊಳ್ಳುತ್ತಿದೆ. ಈ ಬಗ್ಗೆ ಮಂಗಳೂರು ವಿ.ವಿ.ಯ ಉಪ ಕುಲಪತಿಗಳು ಉತ್ತಮ ನಿರ್ಧಾರವನ್ನು ಕೈಗೊಂಡು ದರ ಇಳಿಸಿ ಕರಾವಳಿಯ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಗಂಟೆಹೊಳೆ ಆಗ್ರಹಿಸಿದ್ದರು. ಇದಕ್ಕೆ ಸಾವಿರಾರು ವಿದ್ಯಾರ್ಥಿಗಳು ಧ್ವನಿಗೂಡಿಸಿದ್ದರು. ಇದೀಗ ವಿ.ವಿ. ಶುಲ್ಕವನ್ನು ಕಡಿಮೆ ಮಾಡುವ ಮೂಲಕ ಪದವಿಧರರಿಗೆ ಆರ್ಥಿಕ ಹೊರೆ ಕಡಿಮೆ ಮಾಡಿದೆ.
ಶಾಸಕರಾದ ಗುರುರಾಜ್ ಗಂಟೆಹೊಳೆ ಅವರು ಮನವಿಗೆ ಸ್ಪಂದಿಸಿದ ಮಂಗಳೂರು ವಿಶ್ವವಿದ್ಯಾಲಯ ಪ್ರತಿ ವಿಷಯದ ಅಂಕಪಟ್ಟಿಯ ಮೇಲೆ ರೂ.500 ಕಡಿಮೆ ಮಾಡಿದೆ. ವರ್ಷಕ್ಕೆ ಸಾವಿರಾರು ವಿದ್ಯಾರ್ಥಿಗಳು ತೇರ್ಗಡೆ ಹೊಂದುತ್ತಾರೆ. ಅಂತಹ ಬಡ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಿದೆ. ಶಾಸಕರಾಗಿ ಹದಿನೈದು ದಿನದಲ್ಲೆ ಸಾವಿರಾರು ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವ ಕೆಲಸ ಮಾಡಿರುವುದು ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿಸಿದೆ.
ವಿ.ವಿ ನಿರ್ಧಾರಕ್ಕೆ ಗಂಟೆಹೊಳೆ ಅವರು ಟ್ವಿಟ್ ಮೂಲಕ ಧನ್ಯವಾದಗಳನ್ನು ಅರ್ಪಿಸಿದ್ದಾರೆ. “ಮಂಗಳೂರು ವಿ.ವಿ. ಕುಲಪತಿಗಳಾದ ಪ್ರೊ| ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ನಮ್ಮ ಕೋರಿಕೆಯನ್ನು ಸ್ವೀಕರಿಸಿ ತ್ವರಿತವಾಗಿ ನಿರ್ಣಯ ತೆಗೆದುಕೊಂಡಿರುವುದು ಅತ್ಯಂತ ಸ್ವಾಗತಾರ್ಹ ವಿಷಯ” ಎಂದಿದ್ದಾರೆ.
ಇನ್ನೊಂದೆಡೆ ಗಂಟೆಹೊಳೆಯವರ ಕಾರ್ಯಕ್ಕೆ ರಾಜ್ಯದ ಮೂಲೆ ಮೂಲೆ ವಿದ್ಯಾರ್ಥಿಗಳಿಂದ ಧನ್ಯವಾದ ಮತ್ತು ಪ್ರಶಂಸೆಗಳ ಮಹಾಪೂರವೇ ಹರಿದು ಬರುತ್ತಿದೆ.
ಮಂಗಳೂರು ವಿ.ವಿ. ಕುಲಪತಿಗಳಾದ ಪ್ರೊ| ಸುಬ್ರಹ್ಮಣ್ಯ ಯಡಪಡಿತ್ತಾಯ ಅವರು ನಮ್ಮ ಕೋರಿಕೆಯನ್ನು ಸ್ವೀಕರಿಸಿ ತ್ವರಿತವಾಗಿ ನಿರ್ಣಯ ತೆಗೆದುಕೊಂಡಿರುವುದು ಅತ್ಯಂತ ಸ್ವಾಗತಾರ್ಹ ವಿಷಯ.
ಸಮಸ್ತ ವಿದ್ಯಾರ್ಥಿಗಳ ಪರವಾಗಿ @MangaloreUniv ಕುಲಪತಿಗಳಿಗೆ ಹಾಗೂ ಈ ವಿಷಯಕ್ಕೆ ಸ್ಪಂದನೆ ನೀಡಿದ ಮಾಧ್ಯಮ ಮಿತ್ರರಿಗೆ ಧನ್ಯವಾದಗಳು. pic.twitter.com/otBHVeVgyQ
— Gururaj Gantihole (@gantihole) May 26, 2023
ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕಲಿತ ಲಕ್ಷಾಂತರ ವಿದ್ಯಾರ್ಥಿಗಳ ಪರವಾಗಿ @MangaloreUniv ಯ ಕುಲಪತಿಗಳಿಗೆ ಒಂದು ಮನವಿ.
ವಿಶ್ವವಿದ್ಯಾನಿಲಯದಲ್ಲಿ ಕಲಿತ ಪ್ರತಿಯೊಬ್ಬರು ಕೆಲಸಕ್ಕೆ ಸೇರಲು ಸರ್ಟಿಫಿಕೇಟ್ ಅನ್ನು ವೆರಿಫಿಕೇಶನ್ ಮಾಡುವ ಅಗತ್ಯವಿರುತ್ತದೆ.
1/4 pic.twitter.com/1JRRl55GFv
— Gururaj Gantihole (@gantihole) May 18, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.