ನವದೆಹಲಿ: ಇರಾಕ್ನಲ್ಲಿ ಇಸಿಸ್ ಉಗ್ರರಿಂದ ಅಪಹರಣಕ್ಕೊಳಗಾಗಿರುವ 39 ಭಾರತೀಯರು ಜೀವಂತವಾಗಿ ಇದ್ದಾರೆ, ಅವರನ್ನು ವಾಪಾಸ್ ಕರೆತರಲು ಎಲ್ಲಾ ಪ್ರಯತ್ನಗಳನ್ನೂ ಸರ್ಕಾರ ಮಾಡಲಿದೆ ಎಂದು ವಿದೇಶಾಂಗ ಸಚಿವಾಲಯ ಮಂಗಳವಾರ ಸ್ಪಷ್ಟಪಡಿಸಿದೆ.
ಪ್ರಧಾನಿ ನರೇಂದ್ರ ಮೋದಿಯವರು ಪ್ಯಾಲೇಸ್ತೇನಿನ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ನಡೆಸಿದ ಮಾತುಕತೆಯ ಸಂದರ್ಭ, ಲೆಬಿಯಾ ಮತ್ತು ಇರಾಕ್ನಲ್ಲಿ ಅಪಹರಣಕ್ಕೀಡಾದ ಭಾರತೀಯರ ಸ್ಥಿತಿಗತಿಯ ಬಗ್ಗೆ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕಾಸ್ ಸ್ವರೂಪ್ ತಿಳಿಸಿದ್ದಾರೆ.
ಭಾರತೀಯರ ಸ್ಥಿತಿಗತಿ ಬಗೆಗಿನ ಎಲ್ಲಾ ಮಾಹಿತಿಯನ್ನು ಹಂಚಿಕೊಳ್ಳುವಂತೆ ಪ್ರಧಾನಿ ಮೆಹಮೂದ್ ಅವರನ್ನು ಒತ್ತಾಯಿಸಿದ್ದಾರೆ. ಇದಕ್ಕೆ ಮೆಹಮೂದ್ ಪ್ರತಿಕ್ರಿಯಿಸಿರುವ ಮೆಹಮೂದ್, ಸಿಗುವ ಎಲ್ಲಾ ಮಾಹಿತಿಯನ್ನು ಭಾರತಕ್ಕೆ ವರ್ಗಾಯಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.
ಅಲ್ಲದೇ ಮೆಹಮೂದ್ ಅಬ್ಬಾಸ್ ಅವರ ಪ್ರಕಾರ ಅಪಹಣಕ್ಕೀಡಾದ ಎಲ್ಲಾ ಭಾರತೀಯರು ಜೀವಂತವಾಗಿದ್ದಾರೆ.
ಕಟ್ಟಡ ನಿರ್ಮಾಣ ಕೆಲಸ ಮಾಡುತ್ತಿದ್ದ 39 ಭಾರತೀಯರನ್ನು ಇಸಿಸ್ ಉಗ್ರರು ಕಳೆದ ವರ್ಷ ಮಸೂಲ್ನಲ್ಲಿ ಅಪಹರಿಸಿದ್ದರು. ಭಾರತ ಸರ್ಕಾರ ಎಷ್ಟೇ ಪ್ರಯತ್ನಿಸಿದರೂ ಅವರ ಬಿಡುಗಡೆ ಇದುವರೆಗೆ ಸಾಧ್ಯವಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.