ನವದೆಹಲಿ: ಈ ವರ್ಷದ ಅಂತ್ಯದೊಳಗೆ ಎಲ್ಲರೂ ಆಧಾರ್ ಕಾರ್ಡ್ ಪಡೆದಿರಬೇಕೆಂಬ ಗುರಿಯನ್ನು ಪ್ರಧಾನಿ ನರೇಂದ್ರ ಮೋದಿ ಹೊಂದಿದ್ದು, ಈ ಬಗ್ಗೆ ಇತ್ತೀಚಿಗೆ ನಡೆದ PRAGATI(Pro-Active Governance And Timely Implementation) ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆಧಾರ್ ನೋಂದಾವಣಿಯಲ್ಲಿ ಹಿಂದೆ ಬಿದ್ದಿರುವ ಉತ್ತರಪ್ರದೇಶ ಮತ್ತು ಬಿಹಾರದಲ್ಲಿ ಎಲ್ಲಾ ನಿವಾಸಿಗಳನ್ನು ಡಿಸೆಂಬರ್ 2015ರೊಳಗೆ ಆಧಾರ್ಗೆ ಸಂಪೂರ್ಣ ನೋಂದಾವಣಿ ಮಾಡಿಕೊಳ್ಳುವಂತೆ ವಿಶಿಷ್ಟ ಗುರುತು ಪ್ರಾಧಿಕಾರ(ಯುಐಡಿಎಐ) ಮತ್ತು ಆ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಮೋದಿ ಸಭೆಯಲ್ಲಿ ಸೂಚಿಸಿದ್ದಾರೆ ಎನ್ನಲಾಗಿದೆ.
ಮೋದಿ JAM (ಜನ್ಧನ್, ಆಧಾರ್, ಮೊಬೈಲ್)ಗೆ ಹೆಚ್ಚಿನ ಒತ್ತು ನೀಡುತ್ತಿದ್ದು, ಈ ಮೂಲಕ ಬಡವರನ್ನು ತಲುಪುವ ಗುರಿ ಹೊಂದದಿದ್ದಾರೆ. ಈ ಬಗ್ಗೆ ಅಮೆರಿಕಾದ ಸಿಲಿಕಾನ್ ವ್ಯಾಲಿಯಲ್ಲೂ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದರು.
5 ವರ್ಷಗಳ ಹಿಂದೆ ಆರಂಭಗೊಂಡಿರುವ ಆಧಾರ್ ಇದುವರೆಗೆ 91.68ಕೋಟಿ ನಾಗರಿಕರನ್ನು ತಲುಪಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.