ಒಟ್ಟಾವಾ: ಕೆನಡಾದ ಎಡ್ಮಂಟನ್ನಲ್ಲಿ ಇತ್ತೀಚಿಗೆ ಹಿಂದೂ ದೇವಾಲಯವನ್ನು ವಿರೂಪಗೊಳಿಸಿದ ಘಟನೆ ನಡೆದಿದ್ದು, ಇದು ಹಿಂದೂ ಸಮುದಾಯವನ್ನು ಕೆರಳಿಸಿದೆ. ಖಲಿಸ್ಥಾನಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ಕೆನಡಾ ಸಂಸದ ಚಂದ್ರ ಆರ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಕೆನಡಾದಲ್ಲಿ ಹೆಚ್ಚುತ್ತಿರುವ ಹಿಂದೂಫೋಬಿಯಾ ನಡುವೆ, ಅಲ್ಬರ್ಟಾ ರಾಜ್ಯದ ಎಡ್ಮಂಟನ್ನಲ್ಲಿ ಸೋಮವಾರ ಬೆಳಗ್ಗೆ BAPS ಸ್ವಾಮಿನಾರಾಯಣ ಮಂದಿರದ ಗೋಡೆಗಳ ಮೇಲೆ ಭಾರತ ವಿರೋಧಿ ಬರಹಗಳನ್ನು ಬರೆದು ವಿರೂಪಗೊಳಿಸಲಾಗಿದೆ.
ಹಿಂದೂ ದೇಗುಲದ ಮೇಲಿನ ದಾಳಿಯನ್ನು ಖಂಡಿಸಿರುವ ಚಂದ್ರ ಆರ್ಯ ಅವರ ಮೇಲೆ ಇದೀಗ ಖಲಿಸ್ಥಾನಿಗಳು ತಿರುಗಿಬಿದ್ದು ಅವರಿಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ. ಅಲ್ಲದೇ ಭಾರತಕ್ಕೆ ಹೋಗುವಂತೆ ಧಮ್ಕಿ ಹಾಕುತ್ತಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಚಂದ್ರ ಆರ್ಯ ಅವರು, ಸ್ವಾತಂತ್ರ್ಯವನ್ನು ದುರುಪಯೋಗಪಡಿಸಿಕೊಳ್ಳುವ ಖಲಿಸ್ತಾನಿ ಉಗ್ರಗಾಮಿಗಳಿಂದ ಕೆನಡಾ ಕಲುಷಿತಗೊಂಡಿದೆ ಎಂದಿದ್ದಾರೆ.
ಹೌಸ್ ಆಫ್ ಕಾಮನ್ಸ್ನಲ್ಲಿ ನೇಪಿಯನ್ ಸಂಸತ್ ಸದಸ್ಯರಾಗಿರುವ ಚಂದ್ರ ಆರ್ಯ ಅವರು ತಮ್ಮ ಎಕ್ಸ್ ಖಾತೆಯಲ್ಲಿನ ಪೋಸ್ಟ್ನಲ್ಲಿ, “ಸಿಖ್ಸ್ ಫಾರ್ ಜಸ್ಟಿಸ್ನ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್ ಪನ್ನುನ್ ಆರ್ಯ ಮತ್ತು ಅವರ ಹಿಂದೂ-ಕೆನಡಾದ ಸ್ನೇಹಿತರು ಭಾರತಕ್ಕೆ ಹಿಂತಿರುಗಬೇಕೆಂದು ಒತ್ತಾಯಿಸುವ ವೀಡಿಯೊವನ್ನು ಬಿಡುಗಡೆ ಮಾಡಿದ್ದಾನೆ ಎಂದು ಹೇಳಿದರು. ಕೆನಡಾದಲ್ಲಿ ಖಲಿಸ್ತಾನ್ ಬೆಂಬಲಿಗರಿಂದ ಹಿಂದೂ ದೇವಾಲಯದ ಧ್ವಂಸ ಮತ್ತು ಇತರ ದ್ವೇಷ ಮತ್ತು ಹಿಂಸಾಚಾರವನ್ನು ಖಂಡಿಸಿದಕ್ಕಾಗಿ ಈ ಬೆದರಿಕೆ ಹಾಕಿದ್ದಾನೆ” ಎಂದಿದ್ದಾರೆ.
“ನಾವು ಹಿಂದೂಗಳು ಅದ್ಭುತ ದೇಶವಾದ ಕೆನಡಾಕ್ಕೆ ಪ್ರಪಂಚದ ಎಲ್ಲಾ ಭಾಗಗಳಿಂದ ಬಂದಿದ್ದೇವೆ. ದಕ್ಷಿಣ ಏಷ್ಯಾದ ಪ್ರತಿಯೊಂದು ದೇಶದಿಂದ, ಆಫ್ರಿಕಾ ಮತ್ತು ಕೆರಿಬಿಯನ್ನ ಅನೇಕ ದೇಶಗಳಿಂದ ಮತ್ತು ಪ್ರಪಂಚದ ಅನೇಕ ಭಾಗಗಳಿಂದ ನಾವು ಇಲ್ಲಿಗೆ ಬಂದಿದ್ದೇವೆ ಮತ್ತು ಕೆನಡಾ ನಮ್ಮ ಭೂಮಿಯಾಗಿದೆ” ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಲಿಬರಲ್ ಪಕ್ಷದ ಸದಸ್ಯ ಆರ್ಯ ಬರೆದಿದ್ದಾರೆ.
In response to my condemnation of the vandalism of the Hindu temple BAPS Swaminarayan Mandir in Edmonton and other acts of hate and violence by Khalistan supporters in Canada, Gurpatwant Singh Pannun of Sikhs for Justice has released a video demanding me and my Hindu-Canadian… pic.twitter.com/vMhnN45rc1
— Chandra Arya (@AryaCanada) July 24, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.