ನವದೆಹಲಿ: ದ್ರೌಪದಿ ಮುರ್ಮು ಅವರು ಇಂದು ಭಾರತದ ರಾಷ್ಟ್ರಪತಿಯಾಗಿ ಎರಡು ವರ್ಷಗಳನ್ನು ಪೂರೈಸಿದ್ದಾರೆ. ಜೂನ್ 20, 1958 ರಂದು ಒಡಿಶಾದ ಮಯೂರ್ಭಂಜ್ ಜಿಲ್ಲೆಯ ಉಪರ್ಬೇಡ ಗ್ರಾಮದಲ್ಲಿ ಜನಿಸಿದ ಮುರ್ಮು ಅವರು ಜುಲೈ 25, 2022 ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅದಕ್ಕೂ ಮೊದಲು ಅವರು 2015 ರಿಂದ 2021 ರವರೆಗೆ ಜಾರ್ಖಂಡ್ನ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.
ಎರಡು ವರ್ಷ ಪೂರೈಸಿದ ವಿಶೇಷ ಸಂದರ್ಭದಲ್ಲಿ ಅವರು ಇಂದು ದೆಹಲಿಯ ರಾಷ್ಟ್ರಪತಿ ಎಸ್ಟೇಟ್ನಲ್ಲಿರುವ ಡಾ ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಬೆರೆತು ಶಿಕ್ಷಕಿಯಾದರು. ಸಂವಾದದ ಸಮಯದಲ್ಲಿ, ಅವರು ಜಾಗತಿಕ ತಾಪಮಾನ ಏರಿಕೆ ಮತ್ತು ಪರಿಸರವನ್ನು ಸಂರಕ್ಷಣೆಯಂತಹ ವಿಷಯಗಳ ಬಗ್ಗೆ ಮಕ್ಕಳೊಂದಿಗೆ ಚರ್ಚಿಸಿದರು.
9 ನೇ ತರಗತಿ ವಿದ್ಯಾರ್ಥಿಗಳ ಗುಂಪನ್ನು ಉದ್ದೇಶಿಸಿ ಮಾತನಾಡಿದ ಮುರ್ಮು, ಹವಾಮಾನ ಬದಲಾವಣೆಯನ್ನು ಎದುರಿಸಲು ಪ್ರಮುಖ ಹಂತಗಳಾಗಿ ನೀರಿನ ಸಂರಕ್ಷಣೆ ಮತ್ತು ಅರಣ್ಯೀಕರಣದ ಪ್ರಾಮುಖ್ಯತೆಯನ್ನು ಸ್ಪಷ್ಟಪಡಿಸಿದರು. ಹೆಚ್ಚೆಚ್ಚು ಗಿಡಗಳನ್ನು ನೆಡಬೇಕು, ಮಳೆ ನೀರು ಕೊಯ್ಲು ಮೂಲಕ ನೀರು ಪೋಲು ಮಾಡುವುದನ್ನು ಕಡಿಮೆ ಮಾಡಿ ನೀರು ಸಂರಕ್ಷಿಸಲು ಮುಂದಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅ ವಾಯು ಮಾಲಿನ್ಯದ ಬಗ್ಗೆ ಮಾತನಾಡಿ, ಅದರ ಪರಿಣಾಮಗಳನ್ನು ತಗ್ಗಿಸಲು ಪ್ರಾಯೋಗಿಕ ಮಾರ್ಗಗಳನ್ನು ಅನ್ವೇಷಿಸಬೇಕು ಎಂದರು.
“ನಾನು ನಿಮ್ಮೊಂದಿಗೆ ಸಂವಹನ ನಡೆಸುವುದನ್ನು ನಿಜವಾಗಿಯೂ ಆನಂದಿಸಿದೆ. ನಿಮ್ಮೆಲ್ಲರಿಂದ ಬಹಳಷ್ಟು ಕಲಿಯಲು ನನಗೆ ಅವಕಾಶ ಸಿಕ್ಕಿತು. ನೀವು 9 ನೇ ತರಗತಿಯಲ್ಲಿ ಓದುತ್ತಿದ್ದೀರಿ ಮತ್ತು ನೀವು ಜಾಗತಿಕ ತಾಪಮಾನದ ಪ್ರಭಾವದ ಬಗ್ಗೆ ಚೆನ್ನಾಗಿ ತಿಳಿದಿರುತ್ತೀರಿ. ನೀವು ದೊಡ್ಡವರಾದಾಗ, ಜಾಗತಿಕ ತಾಪಮಾನವು ಹೆಚ್ಚಾಗದಂತೆ ನೀವು ಕ್ರಮವಹಿಸುವಿರಿ ಎಂಬ ಖಾತ್ರಿಯಿದೆ” ಎಂದು ರಾಷ್ಟ್ರಪತಿ ಮುರ್ಮು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರ ‘ಏಕ್ ಪೆಡ್ ಮಾ ಕೆ ನಾಮ್’ ಉಪಕ್ರಮದ ಬಗ್ಗೆ ತಿಳಿಸುತ್ತಾ, ತಮ್ಮ ತಮ್ಮ ಜನ್ಮದಿನದಂದು ಗಿಡವನ್ನು ನೆಡಲು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು, ಪರಿಸರ ಸಂರಕ್ಷಣೆಗೆ ವೈಯಕ್ತಿಕ ಕೊಡುಗೆಗಳ ಮಹತ್ವವನ್ನು ಬಲಪಡಿಸಿದರು.
LIVE: President Droupadi Murmu teaches the students of Class IX of Dr. Rajendra Prasad Kendriya Vidyalaya, President’s Estate, on completion of 2 year of Presidency https://t.co/FIrBrZp8qJ
— President of India (@rashtrapatibhvn) July 25, 2024
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.