ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿಯನ್ನು ಡೆಮಾಕ್ರಟಿಕ್ ಪ್ರೊಗ್ರೇಸಿವ್ ಪಕ್ಷದ ಮುಖ್ಯಸ್ಥ ಗುಲಾಂ ನಬೀ ಅಜಾದ್ ಖಂಡಿಸಿದ್ದಾರೆ. ಮಾತ್ರವಲ್ಲ ಕಾಶ್ಮೀರ ಹಿಂದಿಗಿಂತ ಈಗ ಹೇಗೆ ಬದಲಾಗಿದೆ ಎಂಬ ಬಗ್ಗೆ ಅವರು ವಿವರಿಸಿದ್ದಾರೆ.
“ಈ ಹಿಂದೆ ಭಯೋತ್ಪಾದಕ ದಾಳಿ ನಡೆದರೆ ಕಾಶ್ಮೀರದ ಜನರು ಅದನ್ನು ಖಂಡಿಸುತ್ತಿರಲಿಲ್ಲ, ಒಂದು ವೇಳೆ ಖಂಡಿಸಿದ್ದರೂ ಅದೂ ತುಂಬಾ ವಿರಳವಾಗಿರುತ್ತಿತ್ತು. ಅವರು ಭಯೋತ್ಪಾದಕರ ವಿರುದ್ಧ ಮಾತನಾಡುವುದಕ್ಕೆ ಹೆದರುತ್ತಿದ್ದರು. ಒಂದು ವೇಳೆ ಭಯೋತ್ಪಾದಕರ ಬಗ್ಗೆ ಮಾತನಾಡಿದರೆ ತಮ್ಮ ಜೀವಕ್ಕೆ ಎಲ್ಲಿ ಅಪಾಯ ಉಂಟಾಗುವುದೋ ಎಂಬ ಭಯ ಅವರಲ್ಲಿತ್ತು. ಆದರೆ ಇದೇ ಮೊದಲ ಬಾರಿಗೆ ಇಡೀ ಜಮ್ಮು ಕಾಶ್ಮೀರವೇ ಶೋಕದಲ್ಲಿ ಮುಳುಗಿದೆ. ಈ ರೀತಿಯ ವಾತಾವರಣವನ್ನು ನಾನು ಇದೇ ಮೊದಲ ಬಾರಿ ನೋಡುತ್ತಿದ್ದೇನೆ. ನಿನ್ನೆಯ ಘಟನೆಗೆ ಪ್ರತಿಕ್ರಿಯೆಯಾಗಿ ಜಮ್ಮು ಕಾಶ್ಮೀರದ ಪ್ರತಿ ಜಿಲ್ಲೆ ಪ್ರತಿ ಗ್ರಾಮ, ಪ್ರತಿ ನಗರ ಸಂಪೂರ್ಣವಾಗಿ ಸ್ತಬ್ಧವಾಗಿದೆ” ಎಂದು ಗುಲಾಂ ನಬಿ ಅಜಾದ್ ಹೇಳಿದ್ದಾರೆ.
ಹಿಂದೆ ಕೆಲ ಮಸೀದಿಗಳೇ ಭಯೋತ್ಪಾದಕರಿಗೆ ಬೆಂಬಲ ನೀಡುವಂತೆ ಜನರನ್ನು ಕೇಳುತ್ತಿದ್ದವು. ಆದರೆ ಇದೇ ಮೊದಲ ಬಾರಿಗೆ ಜಮ್ಮು ಕಾಶ್ಮೀರದ ಮಸೀದಿಗಳಲ್ಲೂ ಘಟನೆಗೆ ಖಂಡನೆ ವ್ಯಕ್ತವಾಗುತ್ತಿದೆ. ಇಲ್ಲಿನ ಎಲ್ಲಾ ಮಸೀದಿಗಳ ಇಮಾಮ್ಗಳು ಭಯೋತ್ಪಾದಕರ ವಿರುದ್ಧ ಮಾತನಾಡುತ್ತಿದ್ದಾರೆ. ಇದು ಬದಲಾದ ಕಾಶ್ಮೀರದ ಚಿತ್ರಣವನ್ನು ನೀಡುತ್ತಿದೆ ಎಂದು ಗುಲಾಂ ನಬೀ ಆಜಾದ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.