ನವದೆಹಲಿ: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಯೋಜಿಸಿದ್ದ ಮಿಲಿಟರಿ ಪರೇಡ್ಗೆ ಪಾಕಿಸ್ಥಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಅಮೆರಿಕ ಆಹ್ವಾನಿಸಿದೆ ಎಂದು ಸುಳ್ಳು ಪ್ರಚಾರ ಮಾಡಿದ್ದ ಕಾಂಗ್ರೆಸ್ ಈಗ ಭಾರೀ ವಿವಾದಕ್ಕೆ ಸಿಲುಕಿದೆ.
ಮುನೀರ್ಗೆ ನಾವು ಯಾವುದೇ ಆಹ್ವಾನವನ್ನು ನೀಡಿಲ್ಲ ಎಂದು ಅಮೆರಿಕ ಹೇಳಿದೆ. ಹೀಗಾಗಿ ಸುಳ್ಳು ಸುದ್ದಿ ಹಬ್ಬಸಿದ್ದ ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ.
ಬಿಜೆಪಿಯು ಪಾಕಿಸ್ಥಾನದ ಮುಖವಾಣಿಯಾಗಿ ಮಾರ್ಪಟ್ಟಿದೆ ಮತ್ತು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಮುಜುಗರಕ್ಕೀಡು ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.
“ಮುನೀರ್ ಅಮೆರಿಕಕ್ಕೆ ಹೋಗುತ್ತಿದ್ದಾರೆ ಎಂದು ಜೈರಾಮ್ ರಮೇಶ್ ಹೇಳಿಕೊಂಡರು ಮತ್ತು ಅದರ ಬಗ್ಗೆ ದೀರ್ಘ ಪತ್ರಿಕಾಗೋಷ್ಠಿ ನಡೆಸಿದರು. ಆದರೆ ಮುನೀರ್ ಹೋಗುತ್ತಿಲ್ಲ ಎಂದು ತಿಳಿದುಬಂದಿದೆ. ಪಾಕಿಸ್ಥಾನದ ಮುಖವಾಣಿಯಂತೆ ವರ್ತಿಸುತ್ತಾ ಕಾಂಗ್ರೆಸ್ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಪಾಕಿಸ್ಥಾನ ಮುಸ್ಲಿಂ ಲೀಗ್ ಮತ್ತು ಜೈರಾಮ್ ರಮೇಶ್ ನಡುವಿನ ವ್ಯತ್ಯಾಸವೇನು?” ಎಂದು ಬಿಜೆಪಿಯ ನಿಶಿಕಾಂತ್ ದುಬೆ ಪ್ರಶ್ನೆ ಮಾಡಿದ್ದಾರೆ.
ಅಲ್ಲದೇ ಖಲಿಸ್ಥಾನಿ ಉಗ್ರವಾದದ ಉದಯ ಮತ್ತು ಅದರ ಅಂತರರಾಷ್ಟ್ರೀಯ ಪರಿಣಾಮಗಳನ್ನು ತೋರಿಸುತ್ತಾ ಕಾಂಗ್ರೆಸ್ ಸರ್ಕಾರಗಳ ವಿದೇಶಾಂಗ ನೀತಿಯನ್ನು ಟೀಕಿಸಿದರು.
ಕೆನಡಾದ ಪ್ರಕರಣವನ್ನು ಉಲ್ಲೇಖಿಸಿದ ಅವರು, 1970 ರ ದಶಕದಿಂದಲೂ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಯಾವುದೇ ಪ್ರತಿರೋಧವಿಲ್ಲದೇ ಖಲಿಸ್ಥಾನಿ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ ಎಂದಿದ್ದಾರೆ.
“ಕಾಂಗ್ರೆಸ್ ಪಕ್ಷವು ಮತ್ತೊಮ್ಮೆ ಪಾಕಿಸ್ಥಾನದ ತಾಳಕ್ಕೆ ತಕ್ಕಂತೆ ನೃತ್ಯ ಮಾಡಿದೆ ಮತ್ತು ಈ ಬಾರಿ ಅವರು ಭಾರತವನ್ನು ಜಾಗತಿಕ ವೇದಿಕೆಯಲ್ಲಿ ಅವಮಾನಿಸಿದ್ದಾರೆ. ಟ್ರಂಪ್ ಆಯೋಜಿಸಿದ್ದ ಯುಎಸ್ ಸೇನಾ ಮೆರವಣಿಗೆಗೆ ಪಾಕಿಸ್ಥಾನದ ಸೇನಾ ಮುಖ್ಯಸ್ಥರನ್ನು ಆಹ್ವಾನಿಸಲಾಗಿದೆ ಎಂಬ ನಕಲಿ ಸುದ್ದಿಯನ್ನು ಜೈರಾಮ್ ರಮೇಶ್ ಹರಿಬಿಟ್ಟರು. ಅದು ಸುಳ್ಳು ಎಂದು ತಿಳಿದುಬಂದಿದೆ” ಎಂದು ಪೋಸ್ಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.