ನವದೆಹಲಿ: ರಾಜ್ಯಾದ್ಯಂತ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಮಟ್ಟದಲ್ಲಿ ವಿವಿಧ ಸ್ಥಳಗಳಲ್ಲಿ ಕಳೆದ ಹಲವಾರು ವರ್ಷಗಳಿಂದ 3657 ನೌಕರರು ನರೇಗಾ ಯೋಜನೆಯಡಿಯಲ್ಲಿ ವಿವಿಧ ಹುದ್ದೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಕಳೆದ ಆರು ತಿಂಗಳದಿಂದ ವೇತನ ಪಾವತಿ ಆಗಿಲ್ಲ ಎಂದು ಬೈಂದೂರು ಶಾಸಕ ಗಂಟಿಹೊಳೆ ಆರೋಪಿಸಿದ್ದಾರೆ..
ಈಗಾಗಲೇ ಕೇಂದ್ರದಿಂದ ಸುಮಾರು 100 ಕೋಟಿ ಮೊತ್ತ ಬಿಡುಗಡೆಯಾಗಿದ್ದರೂ ಕೆಲವು ತಾಂತ್ರಿಕ ಅಡಚಣೆಯಿಂದ ತ್ವರಿತವಾಗಿ ವೇತನ ಪಾವತಿಸಲು ಆಗದೆ ಇರುವ ಕಾರಣ ಎಲ್ಲಾ ನರೇಗಾ ಸಿಬ್ಬಂದಿಗಳು ಅವರ ಕುಟುಂಬಸ್ಥರು ಸಂಕಷ್ಟಕ್ಕೆ ಒಳಗಾಗಿರುತ್ತಾರೆ. ಅಲ್ಲದೆ ಗ್ರಾಮೀಣ ಜನರಿಗೆ ಉದ್ಯೋಗ ಒದಗಿಸುವಲ್ಲಿ ನರೇಗಾ ಸಿಬ್ಬಂದಿಗಳು ಬಹು ಮುಖ್ಯ ಪಾತ್ರವನ್ನು ವಹಿಸಿರುತ್ತಾರೆ. ಹಾಗಾಗಿ ಒಂದು ಬಾರಿಗೆ ಪ್ರಸ್ತುತ ಬಿಡುಗಡೆ ಆಗಿರುವ ಮೊತ್ತದಲ್ಲಿ ತಂತ್ರಾಂಶ ರಹಿತವಾಗಿ ಬಾಕಿ ವೇತನವನ್ನು ಪಾವತಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಶ್ರೀ ಪ್ರಿಯಾಂಕ ಖರ್ಗೆ ಅವರಿಗೆ ಶಾಸಕರು ಈಗಾಗಲೇ ಪತ್ರ ಮುಖೇನ ಮನವಿ ಮಾಡಿದ್ದಾರೆ.
ಹಾಗೂ ನರೇಗಾ ಆಯುಕ್ತರು ಮತ್ತು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗಳಿಗೂ ಮನವಿ ಮಾಡಿದ್ದರು. ಇದರ ಹೊರತಾಗಿಯೂ ನರೇಗಾ ಸಿಬ್ಬಂದಿಗಳಿಗೆ ವೇತನ ಪಾವತಿ ಆಗದ ಕಾರಣ ಡಾ. ಶಾಲಿನಿ ರಜನೀಶ್ ರವರು ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ನರೇಗಾ ಸಿಬ್ಬಂದಿಗಳಿಗೆ ಆರು ತಿಂಗಳಿನಿಂದ ಬಾಕಿ ಇರುವ ವೇತನವನ್ನು ಒಂದು ಬಾರಿಗೆ ತಂತ್ರಾಂಶ ರಹಿತವಾಗಿ ಸಾಮಾನ್ಯ ರೂಪದಲ್ಲಿ ಪಾವತಿಸಲು ಯಾವುದೇ ವಿಳಂಬಕ್ಕೆ ಆಸ್ಪದ ಇಲ್ಲದಂತೆ ಅಗತ್ಯ ಕ್ರಮವಹಿ ಸಬೇಕೆಂದು ಆಗ್ರಹಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.