ನವದೆಹಲಿ: ಜೂನ್ನಲ್ಲಿ ಉಧಮ್ಪುರದ ದುಡು-ಬಸಂತ್ಗಢ ಅರಣ್ಯ ಪ್ರದೇಶದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಪಾಕಿಸ್ಥಾನದ ಹಿರಿಯ ಜೈಶ್-ಎ-ಮೊಹಮ್ಮದ್ (ಜೆಇಎಂ) ಕಮಾಂಡರ್ನನ್ನು ಹತ್ಯೆಗೈದಿದ್ದು ಮಹತ್ವದ ಪ್ರಗತಿಯಾಗಿದೆ ಎಂದು ವರದಿಗಳು ತಿಳಿಸಿವೆ.
ಹತ್ಯೆಗೀಡಾದ ಭಯೋತ್ಪಾದಕ ಸುಮಾರು ನಾಲ್ಕು ವರ್ಷಗಳಿಂದ ಈ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ.
ಅಖ್ನೂರ್ ಪೊಲೀಸ್ ಠಾಣೆಯಲ್ಲಿ ವರದಿಗಾರರೊಂದಿಗೆ ಮಾತನಾಡಿದ ಜಮ್ಮು ಮತ್ತು ಕಾಶ್ಮೀರ ಡಿಜಿಪಿ ನಳಿನ್ ಪ್ರಭಾತ್ ಈ ಯಶಸ್ಸನ್ನು ಘೋಷಿಸಿದ್ದಾರೆ.
“ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳು ನಿರಂತರವಾಗಿ ನಡೆಯುತ್ತಿವೆ ಮತ್ತು ಇತ್ತೀಚೆಗೆ, ದುಡು-ಬಸಂತ್ಗಢದಲ್ಲಿ ನಮಗೆ ದೊಡ್ಡ ಯಶಸ್ಸು ಸಿಕ್ಕಿತು, ಅಲ್ಲಿ ಕಳೆದ ನಾಲ್ಕು ವರ್ಷಗಳಿಂದ ಆ ಪ್ರದೇಶದಲ್ಲಿ ಸಕ್ರಿಯರಾಗಿದ್ದ ಹಿರಿಯ ಮತ್ತು ಉನ್ನತ ಜೆಇಎಂ ಕಮಾಂಡರ್ ಕೊಲ್ಲಲ್ಪಟ್ಟ” ಎಂದು ಪ್ರಭಾತ್ ವರದಿಯಲ್ಲಿ ಉಲ್ಲೇಖಿಸಿದ್ದಾರೆ.
“ಕಾರ್ಯಾಚರಣೆಗಳು ನಡೆಯುತ್ತಿವೆ ಮತ್ತು ಎಲ್ಲಾ ಭಯೋತ್ಪಾದಕರನ್ನು ಒಬ್ಬೊಬ್ಬರಾಗಿ ನಿರ್ಮೂಲನೆ ಮಾಡಲಾಗುತ್ತದೆ” ಎಂದು ಎಂದಿದ್ದಾರೆ.
ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಗಳ ಯಶಸ್ಸಿನಲ್ಲಿ ಸಾರ್ವಜನಿಕ ಬೆಂಬಲದ ಮಹತ್ವವನ್ನು ಅವರು ಒತ್ತಿ ಹೇಳಿದರು.
ಜೂನ್ 26 ರಂದು, ಭದ್ರತಾ ಪಡೆಗಳು ಪಾಕಿಸ್ಥಾನಿ ಜೆಇಎಂ ಭಯೋತ್ಪಾದಕ ಹಾಲ್ದರ್ ಅಥವಾ ಮೌಲ್ವಿಯನ್ನು ತೀವ್ರ ಗುಂಡಿನ ಚಕಮಕಿಯಲ್ಲಿ ಕೊಂದು ಹಾಕಿದ್ದಾರೆ. ಪ್ರತಿಕೂಲ ಹವಾಮಾನ ಮತ್ತು ಸವಾಲಿನ ಅರಣ್ಯ ಭೂಪ್ರದೇಶದ ಲಾಭ ಪಡೆದು ಅವನ ಮೂವರು ಸಹಚರರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.