ನವದೆಹಲಿ: ಕೇಂದ್ರ ಆರೋಗ್ಯ ಸಚಿವಾಲಯವು ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತದ ಔಷಧಿಗಳನ್ನು ಶಿಫಾರಸು ಮಾಡಬಾರದು ಅಥವಾ ನೀಡಬಾರದು ಎಂದು ಸೂಚಿಸಿದೆ.
ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಈ ಔಷಧಿಗಳನ್ನು ಸಾಮಾನ್ಯವಾಗಿ ಶಿಫಾರಸು ಮಾಡುವುದಿಲ್ಲ. ಸಣ್ಣ ಮಕ್ಕಳಿಗೆ ಇದರ ಬಳಕೆಯನ್ನು ಎಚ್ಚರಿಕೆಯಿಂದ ಕ್ಲಿನಿಕಲ್ ಮೌಲ್ಯಮಾಪನವನ್ನು ಅನುಸರಿಸಿ ನಿಕಟ ಮೇಲ್ವಿಚಾರಣೆಯೊಂದಿಗೆ ನಡೆಸಬೇಕು ಎಂದು ಸಚಿವಾಲಯವು ಸಲಹೆಯಲ್ಲಿ ತಿಳಿಸಿದೆ.
ಈ ನಿಟ್ಟಿನಲ್ಲಿ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಆರೋಗ್ಯ ಸೇವೆಗಳ ನಿರ್ದೇಶಕರಿಗೆ ಪತ್ರ ಬರೆದಿದೆ. ಮಕ್ಕಳಲ್ಲಿ ಕಂಡುಬರುವ ಹೆಚ್ಚಿನ ತೀವ್ರ ಕೆಮ್ಮು ಕಾಯಿಲೆಗಳು ಸ್ವಯಂ-ಸೀಮಿತವಾಗಿರುತ್ತವೆ ಮತ್ತು ಹೆಚ್ಚಾಗಿ ಔಷಧೀಯ ಹಸ್ತಕ್ಷೇಪವಿಲ್ಲದೆಯೇ ಪರಿಹಾರವಾಗುತ್ತದೆ ಎಂದು ಅದು ಹೇಳಿದೆ.
ಮಧ್ಯಪ್ರದೇಶ, ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಕುಡಿದು 12 ಹಸುಳೆಗಳು ಸಾವಗೀಡಾಗಿವೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ.
ಮಧ್ಯಪ್ರದೇಶದಲ್ಲಿ ಮಕ್ಕಳ ಸಾವುಗಳು ಕೆಮ್ಮಿನ ಸಿರಪ್ಗಳ ಸೇವನೆಗೆ ಸಂಬಂಧಿಸಿವೆ ಎಂದು ಸೂಚಿಸುವ ಇತ್ತೀಚಿನ ವರದಿಗಳನ್ನು ಗಮನದಲ್ಲಿಟ್ಟುಕೊಂಡು, ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ, ರಾಷ್ಟ್ರೀಯ ವೈರಾಲಜಿ ಸಂಸ್ಥೆ, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯ ಪ್ರತಿನಿಧಿಗಳನ್ನು ಒಳಗೊಂಡ ಜಂಟಿ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ವಿವಿಧ ಕೆಮ್ಮು ಸಿರಪ್ಗಳ ಮಾದರಿಗಳು ಸೇರಿದಂತೆ ವಿವಿಧ ಮಾದರಿಗಳನ್ನು ರಾಜ್ಯ ಅಧಿಕಾರಿಗಳೊಂದಿಗೆ ಸಮನ್ವಯದಿಂದ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.