ನವದೆಹಲಿ: ಸಂಬಂಧಗಳನ್ನು ಪುನರುಜ್ಜೀವನಗೊಳಿಸುವ ಮತ್ತು ಬಲಪಡಿಸುವ ಉದ್ದೇಶದಿಂದ ಪ್ರಮುಖ ರಾಜತಾಂತ್ರಿಕ ಪುನರುಜ್ಜೀವನದ ಹಾದಿಯಲ್ಲಿ ಭಾರತ-ಕೆನಡಾ ಸಾಗುತ್ತಿದ್ದು, ಪ್ರಸ್ತುತ ಕೆನಡಾದ ವಿದೇಶಾಂಗ ಸಚಿವೆ ಅನಿತಾ ಆನಂದ್ ನವದೆಹಲಿಗೆ ದ್ವಿಪಕ್ಷೀಯ ಭೇಟಿಯಲ್ಲಿದ್ದಾರೆ.
ಅಕ್ಟೋಬರ್ 13 ರಂದು, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅನಿತಾ ಅವರೊಂದಿಗೆ ದ್ವಿಪಕ್ಷೀಯ ಚರ್ಚೆಗಳನ್ನು ನಡೆಸಿದ್ದು, ವ್ಯಾಪಾರ ಮತ್ತು ಹೂಡಿಕೆಯಿಂದ ಇಂಧನ ಮತ್ತು ಭದ್ರತೆಯವರೆಗೆ ವ್ಯಾಪಕ ಶ್ರೇಣಿಯ ವಿಷಯಗಳ ಕುರಿತು ಇಬ್ಬರೂ ನಾಯಕರು ಚರ್ಚಿಸಿದ್ದಾರೆ. ಪರಸ್ಪರ ಕಾರ್ಯತಂತ್ರದ ಲಾಭಕ್ಕಾಗಿ ಮತ್ತು ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಏರಿಳಿತಗಳ ಹಿನ್ನೆಲೆಯಲ್ಲಿ ದ್ವಿಪಕ್ಷೀಯ ಮತ್ತು ರಾಜತಾಂತ್ರಿಕ ಸಂಬಂಧಗಳನ್ನು ಪುನಃಸ್ಥಾಪಿಸಲು ಇಬ್ಬರೂ ಒಪ್ಪಿಕೊಂಡಿದ್ದಾರೆ.
ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಅತ್ಯಂತ ಕೆಳಮಟ್ಟಕ್ಕೆ ಕುಸಿದಿದ್ದು, ಕೆನಡಾದ ಮಾಜಿ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಆಳ್ವಿಕೆಯಲ್ಲಿ ರಾಜತಾಂತ್ರಿಕ ಅಮಾನತುಗಳು ನಡೆದವು. ಕೆನಡಾದ ನಾಗರಿಕರಾಗಿದ್ದ ಖಲಿಸ್ತಾನಿ ಉಗ್ರಗಾಮಿಗಳ ಹತ್ಯೆಯಲ್ಲಿ ಭಾರತ ಸರ್ಕಾರ ಭಾಗಿಯಾಗಿದೆ ಎಂದು ಯಾವುದೇ ಪುರಾವೆಗಳಿಲ್ಲದ ಕೆನಡಾ ಸರ್ಕಾರ ಆರೋಪಿಸಿತ್ತು. ಅಂದಿನಿಂದ, ನವದೆಹಲಿ-ಒಟ್ಟಾವಾ ಸಂಬಂಧಗಳು “ಶೀತಲ ಹಂತ”ವನ್ನು ತಲುಪಿದ್ದವು.
ಆದರೆ, ಪ್ರಧಾನಿ ಮಾರ್ಕ್ ಕಾರ್ನಿ ನೇತೃತ್ವದಲ್ಲಿ ಒಟ್ಟಾವಾದಲ್ಲಿ ಹೊಸ ಆಡಳಿತ ಅಧಿಕಾರಕ್ಕೆ ಬಂದ ಬಳಿಕ, ಭಾರತ-ಕೆನಡಾ ಸಂಬಂಧಗಳು ಕ್ರಮೇಣ ಪುನರುಜ್ಜೀವನಗೊಳ್ಳುತ್ತಿವೆ ಮತ್ತು ತ್ವರಿತ ರಾಜತಾಂತ್ರಿಕ ಚರ್ಚೆಗಳು ಮತ್ತು ವಿನಿಮಯಗಳನ್ನು ಕಾಣುತ್ತಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿಯವರನ್ನು ಕೆನಡಾದ ಕನನಾಸ್ಕಿಸ್ನಲ್ಲಿ ನಡೆಯಲಿರುವ ಜಿ-7 ಶೃಂಗಸಭೆಗೆ ಆಹ್ವಾನಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.