
ಕೋಲ್ಕತ್ತಾ: ಪಶ್ಚಿಮಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರವು SIR (ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ) ಅನ್ನು ವಿರೋಧಿಸುವ ಮೂಲಕ ಬಾಂಗ್ಲಾದೇಶದ ಅಕ್ರಮ ನುಸುಳುಕೋರರನ್ನು ರಕ್ಷಣೆ ಮಾಡುತ್ತಿದೆ ಎಂದು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಕಾರಿ ಆರೋಪಿಸಿದ್ದಾರೆ.
ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು SIR ವಿರುದ್ಧ ದೆಹಲಿಯಲ್ಲಿ ಮೆಗಾ ಪ್ರತಿಭಟನೆ ನಡೆಸುವುದಾಗಿ ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಅವರು, ಟಿಎಂಸಿ ಪಕ್ಷವು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಅವಮಾನಿಸುತ್ತಿದೆ ಎಂದು ಆರೋಪಿಸಿದರು. ಅಲ್ಲದೇ ಈ ವಿಷಯದಲ್ಲಿ ಚುನಾವಣಾ ಆಯೋಗವು ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.
ಟಿಎಂಸಿ ನಾಯಕರು ಬಾಂಗ್ಲಾದೇಶದ ಮುಸ್ಲಿಮರು, ರೋಹಿಂಗ್ಯಾಗಳನ್ನು ಒಟ್ಟುಗೂಡಿಸುವ ಮೂಲಕ ಅಕ್ರಮ ನುಸುಳುಕೋರರನ್ನು ರಕ್ಷಿಸುತ್ತಿದ್ದಾರೆ ಎಂದು ಸುವೇಂದು ಆರೋಪಿಸಿದ್ದಾರೆ.
ಆಡಳಿತಾರೂಢ ಟಿಎಂಸಿಯನ್ನು ಟೀಕಿಸಿದ ಅಧಿಕಾರಿ, “ದಯವಿಟ್ಟು ಅಲ್ಲಿಗೆ ಹೋಗಿ. ಯಾವುದೇ ತೊಂದರೆ ಇಲ್ಲ. ಮೊದಲು ಅವರು ಅಲ್ಲಿಗೆ ಹೋಗಿದ್ದರು, ಮತ್ತು ಏನಾಯಿತು ಎಂದು ಎಲ್ಲರೂ ನೋಡಿದರು. ಈಗ ನಾವು ಕಾಯುತ್ತಿದ್ದೇವೆ, ದಯವಿಟ್ಟು ಹೋಗಿ. ಅವರು ಬಂಗಾಳವನ್ನು ತೊರೆದಾಗ, ಬಂಗಾಳ ಸುರಕ್ಷಿತವಾಗಿರುತ್ತದೆ” ಎಂದು ಹೇಳಿದರು.
“ಟಿಎಂಸಿಯವರು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವನ್ನು ಅವಮಾನಿಸುತ್ತಿದ್ದಾರೆ; ಚುನಾವಣಾ ಆಯೋಗವು ಅವರ ಮೇಲೆ ಕ್ರಮ ಕೈಗೊಳ್ಳಬೇಕು. ಅವರು ಬಾಂಗ್ಲಾದೇಶದ ಮುಸ್ಲಿಮರಾದ ರೋಹಿಂಗ್ಯಾಗಳನ್ನು ಒಟ್ಟುಗೂಡಿಸುವ ಮೂಲಕ ಅಕ್ರಮ ನುಸುಳುಕೋರರನ್ನು ರಕ್ಷಿಸುತ್ತಿದ್ದಾರೆ. ಸಿಎಎ ಬಂದಾಗ, ಎನ್ಆರ್ಸಿ ಹೆಸರಿನಲ್ಲಿ ಅವರು ಇದೇ ಕೆಲಸವನ್ನು ಮಾಡಿದ್ದರು. ಈ ಬಾರಿ, ಅವರು ಎಸ್ಐಆರ್ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಈ ಮೂಲಕ ಅವರು ಬಂಗಾಳದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕದಡಿಸುತ್ತಿದ್ದಾರೆ ಮತ್ತು ಹಿಂದೂಗಳಲ್ಲಿ ಭಯವನ್ನು ಸೃಷ್ಟಿಸುತ್ತಿದ್ದಾರೆ” ಎಂದು ಅಧಿಕಾರಿ ಆರೋಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.



