ನವದೆಹಲಿ: ಭಾರತದಲ್ಲಿ ವಾಣಿಜ್ಯ ಬಾಡಿಗೆ ತಾಯ್ತನವನ್ನು ನಿಷೇಧಿಸಲು ಕೇಂದ್ರ ಮುಂದಾಗಿದೆ.
ವಿದೇಶಿ ದಂಪತಿಗಳು ಭಾರತದ ಬಾಡಿಗೆ ತಾಯಂದಿರ ಮೂಲಕ ಮಗುವನ್ನು ಪಡೆಯುವುದಕ್ಕೆ ಅನುಮತಿ ನಿರಾಕರಿಸಲು ಕೇಂದ್ರ ಮುಂದಾಗಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ ಶೀಘ್ರದಲ್ಲೇ ಮಾಹಿತಿಯನ್ನು ನೀಡಲಿದೆ.
ಈ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿ ನರೇಂದ್ರ ಮೋದಿ ಸರ್ಕಾರ, ಭಾರತವನ್ನು ಜಗತ್ತಿನ ಬಾಡಿಗೆ ತಾಯ್ತನದ ರಾಜಧಾನಿಯನ್ನಾಗಿಸಲು ಬಿಡುವುದಿಲ್ಲ ಎಂದು ಸುಪ್ರೀಂಕೋರ್ಟ್ಗೆ ತಿಳಿಸುವಂತೆ ಸಾಲಿಸಿಟ್ ಜನರಲ್ ರಂಜಿತ್ ಕುಮಾರ್ ಅವರಿಗೆ ಸೂಚಿಸಿದೆ.
ಆದರೆ ಭಾರತೀಯ ದಂಪತಿಗಳು ಮಕ್ಕಳನ್ನು ಪಡೆಯಲು ಬಾಡಿಗೆ ತಾಯ್ತನ ಒಂದು ಆಯ್ಕೆಯಾಗಿ ಮುಂದುವರೆಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಆದರೆ ವಾಣಿಜ್ಯ ಬಾಡಿಗೆ ತಾಯ್ತನವನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ವಾಣಿಜ್ಯ ಬಾಡಿಗೆ ತಾಯ್ತನಕ್ಕೆ ಅವಕಾಶವಿಲ್ಲವಾದರೂ ಭಾರತದಲ್ಲಿ ಅದು ಕಾನೂನು ಬಾಹಿರ ವ್ಯವಹಾರವಾಗಿ ಮುಂದುವರೆಯುತ್ತಿದೆ. ಮಾನವ ಭ್ರೂಣವನ್ನು ಮಾರಾಟ ಮಾಡಲು ನೀವು ಆಸ್ಪದ ನೀಡುತ್ತಿದ್ದೀರಿ, ಭಾರತ ಸರೋಗಸಿ ಪ್ರವಾಸಿ ಸ್ಥಳವಾಗಿ ರೂಪುಗೊಳ್ಳುತ್ತಿದೆ ಎಂದು ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.
ಈ ನಿಟ್ಟಿನಲ್ಲಿ ಎಚ್ಚೆತ್ತುಕೊಂಡಿರುವ ಕೇಂದ್ರ ವಿದೇಶಿಗರಿಗೆ ಭಾರತೀಯರು ಬಾಡಿಗೆ ತಾಯಂದಿರಾಗಲು ಆಸ್ಪದ ನೀಡದಿರಲು ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.