ನವದೆಹಲಿ: ಬಿಹಾರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವಂತೆ ಮನಮೋಹನ್ ಸಿಂಗ್ ಸರ್ಕಾರ ನನ್ನ ಮೇಲೆ ಒತ್ತಡ ತಂದಿತ್ತು ಎಂದು ಮಾಜಿ ಕಾನೂನು ಸಚಿವ ಹಂಸರಾಜ್ ಭಾರಧ್ವಜ್ ಹೇಳಿದ್ದಾರೆ.
ದೆಹಲಿಯ ನ್ಯಾಷನಲ್ ಲಾ ಯೂನಿವರ್ಸಿಟಿಯ ಮೂಟ್ ಕೋರ್ಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಅವರ ಈ ಹೇಳಿಕೆ ಕಾಂಗ್ರೆಸ್ಗೆ ಭಾರೀ ಮುಜುಗರವನ್ನುಂಟು ಮಾಡಿದೆ.
2005ರಲ್ಲಿ ಕೇಂದ್ರದಲ್ಲಿ ಯುಪಿಎ ಸರ್ಕಾರವಿದ್ದ ಸಂದರ್ಭ ಬಿಹಾರದಲ್ಲಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಲಾಗಿತ್ತು, ಬಳಿಕ ಇದನ್ನು ಸುಪ್ರೀಂಕೋರ್ಟ್ನ ಐದು ನ್ಯಾಯಧೀಶರನ್ನೊಳಗೊಂಡ ನ್ಯಾಯಪೀಠ ರದ್ದುಪಡಿಸಿತ್ತು.
ಇದೇ ಮೊದಲ ಬಾರಿಗೆ ಹಂಸರಾಜ್ ಈ ರೀತಿಯ ಹೇಳಿಕೆ ನೀಡುತ್ತಿಲ್ಲ, ಈ ಹಿಂದೆಯೂ ಅನೇಕ ಬಾರಿ ತಮ್ಮದೇ ಕಾಂಗ್ರೆಸ್ ಪಕ್ಷದ ವಿರುದ್ಧ ಮಾತನಾಡಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.