Tuesday, February 23rd, 2016
News13
ಮಂಗಳೂರು : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಹುಮತದೊಂದಿಗೆ ಜಿಲ್ಲಾ ಪಂಚಾಯತ್ ಹಾಗೂ ಅನೇಕ ತಾಲೂಕು ಪಂಚಾಯತ್ ಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮತದಾರ ಬಂಧುಗಳಿಗೆ ಹಾಗೂ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರಿಗೆ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅನಂತ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಮತದಾರರು ಪಕ್ಷದ ಮೇಲಿಟ್ಟಿರುವ ವಿಶ್ವಾಸ ಹಾಗೂ ಅಭಿಮಾನಕ್ಕೆ ಅಭಾರಿಯಾಗಿದ್ದು, ಪಕ್ಷ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಲು ಬದ್ಧವಾಗಿದೆ. ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅವಳಿ ಜಿಲ್ಲೆಗಳ ಎಲ್ಲಾ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳಿಗೆ ಅಭಿನಂದನೆಗಳು ಅವರು ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.