ನವದೆಹಲಿ: ವಾರಣಾಸಿಯನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮತ್ತಷ್ಟು ಪುಷ್ಟಿ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಲ್ಲಿನ ಮೀನುಗಾರರಿಗೆ ಇ-ಬೋಟ್ಗಳನ್ನು ಹಂಚಲು ನಿರ್ಧರಿಸಿದ್ದಾರೆ.
ಪವಿತ್ರ ಗಂಗಾ ನದಿಯಲ್ಲಿ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಇದರಿಂದ ಸಾಕಷ್ಟು ಪ್ರಯೋಜನವಾಗಲಿದೆ.
ಭಾನುವಾರ ವಾರಣಾಸಿಗೆ ಆಗಮಿಸಲಿರುವ ಮೋದಿ ಅಲ್ಲಿ ನಿಶದ್ ಸಮುದಾಯದ ಮೀನುಗಾರರ ಜೊತೆ ಮಾತುಕತೆ ನಡೆಸಿದ ಬಳಿಕ ಮೇ 1 ರಂದು 11 ಇ-ಬೋಟ್ಗೆ ಮೋದಿ ಚಾಲನೆ ನೀಡಲಿದ್ದಾರೆ.
ಇದು ದೇಶದ ಮೊದಲ ಇ-ಬೋಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಸಂಪ್ರಾದಾಯಿಕ ರಾ ಬೋಟ್ಗೆ ಪರ್ಯಾಯವಾಗಿ 30 ಸಾವಿರ ಮೀಡಿಯಂ ಗಾತ್ರದ ಬ್ಯಾಟರಿ ಆಪರೇಟೆಡ್ ಬೋಟ್ಗಳನ್ನು ಆರಂಭಿಸುವುದು ಈ ಯೋಜನೆಯ ಗುರಿಯಾಗಿದೆ. ಇದು ಪ್ರಕೃತಿ ಸ್ನೇಹಿಯಾಗಿದ್ದು, ಶಬ್ದ ಮಾಲಿನ್ಯ ಉಂಟು ಮಾಡುವುದಿಲ್ಲ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.