ಮುಂಬಯಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಹಗರಣದ ಕೇಂದ್ರ ಬಿಂದುವಾದ ಆದರ್ಶ್ ಹೌಸಿಂಗ್ ಸೊಸೈಟಿ ಕಟ್ಟಡವನ್ನು ನೆಲಸಮ ಮಾಡುವಂತೆ ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ.
ದಕ್ಷಿಣ ಮುಂಬಯಿಯಲ್ಲಿರುವ ಈ ಕಟ್ಟಡ 31 ಮಹಡಿಗಳನ್ನು ಹೊಂದಿದೆ, ಇದನ್ನು ಪರಿಸರ ನಿಯಮಗಳಿಗೆ ವಿರುದ್ಧವಾಗಿ ಕಟ್ಟಲಾಗಿದೆ ಮತ್ತು ಅಗತ್ಯವಾದ ಅನುಮತಿಗಳನ್ನೂ ಇದರ ನಿರ್ಮಾಣಕ್ಕೆ ಪಡೆದುಕೊಳ್ಳಲಾಗಿಲ್ಲ ಎಂಬ ಆರೋಪಗಳಿವೆ.
ಅಲ್ಲದೇ ಹುತಾತ್ಮ ಯೋಧರಿಗೆಂದು ನಿರ್ಮಿಸಲಾದ ಈ ಹೌಸಿಂಗ್ ಸೊಸೈಟಿಯಲ್ಲಿ ರಾಜಕಾರಣಿಗಳು ಸಾಕಷ್ಟು ಭ್ರಷ್ಟಾಚಾರವನ್ನೂ ಎಸಗಿದ್ದರು.
ಈ ಎಲ್ಲಾ ಹಿನ್ನಲೆಯಲ್ಲಿ ಕಟಟ್ಡದ ನೆಲಸಮಕ್ಕೆ ಹೈಕೋರ್ಟ್ ಆದೇಶಿಸಿದ್ದು, ಈ ಬಗ್ಗೆ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರಕ್ಕೆ 12 ವಾರಗಳ ಕಾಲಾವಕಾಶವನ್ನು ನೀಡಿದೆ.
ಅಲ್ಲದೇ ಹಗರಣದಲ್ಲಿ ಭಾಗಿಯಾದ ರಾಜಕಾರಣಿಗಳ, ಸಚಿವರ, ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಸೂಚನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.