ನವದೆಹಲಿ: ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಸೋಮವಾರ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆ ಕರೆದು ನ್ಯಾಷನಲ್ ಎಲಿಜಿಬಿಟಿಲಿ ಕಂ ಎಂಟ್ರೆನ್ಸ್ ಟೆಸ್ಟ್(NEET) ಬಗ್ಗೆ ಸಮಾಲೋಚನೆ ನಡೆಸಿದರು.
ಈ ವರ್ಷ ನೀಟ್ ಆಯೋಜನೆಯ ಬಗ್ಗೆ ಅವರು ಸಚಿವರುಗಳ ಅಭಿಪ್ರಾಯವನ್ನು ಕೇಳಿದರು.
ಈ ವರ್ಷ NEET ಆಯೋಜಿಸುವುದರ ಬಗ್ಗೆ ಹಲವಾರು ಮಂದಿ ಕಾಳಜಿ ವ್ಯಕ್ತಪಡಿಸಿದ್ದಾರೆ, ಮುಂದಿನ ಕ್ರಮವನ್ನು ಸರ್ಕಾರ ಶೀಘ್ರದಲ್ಲೇ ಕೈಗೊಳ್ಳಲಿದೆ ಎಂದು ಸಭೆಯ ಬಳಿಕ ನಡ್ಡಾ ತಿಳಿಸಿದರು.
ಕಾಮನ್ ಮೆಡಿಕಲ್ ಎಂಟ್ರೆನ್ಸ್ ಟೆಸ್ಟ್ಗೆ ಹಲವಾರು ಸಂಸದರು ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಮೆಡಿಕಲ್ ಅಥವಾ ಡೆಂಟಲ್ ಕಾಲೇಜುಗಳಿಗೆ ಪ್ರವೇಶ ಪಡೆಯಲು NEET ಬರೆಯಬೇಕು ಎಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.