ನವದೆಹಲಿ: ಯಮುನಾ ಎಕ್ಸ್ಪ್ರೆಸ್ವೇ ಕೈಗಾರಿಕಾ ಪ್ರಾಧಿಕಾರ (Yeida) ಕೈಗಾರಿಕಾ ಹಾಗೂ ಸಾಂಸ್ಥಿಕ ಬಳಕೆಗೆ ಯೋಗ ಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಯೋಗಪೀಠಕ್ಕೆ 750 ಎಕರೆ ಭೂಮಿಯನ್ನು ಮಂಜೂರು ಮಾಡುವ ಸಾಧ್ಯತೆ ಇದೆ.
ರಾಮ್ದೇವ್ ಅವರು ಎಕ್ಸ್ಪ್ರೆಸ್ವೇ ಸುತ್ತಲಿನ 400 ಎಕರೆ ಭೂಪ್ರದೇಶದಲ್ಲಿ ಪ್ರಕೃತಿ ಚಿಕಿತ್ಸಾ ಕೇಂದ್ರ, 300 ಎಕರೆ ಭೂಪ್ರದೇಶದಲ್ಲಿ ಕೈಗಾರಿಕಾ ಘಟಕ ಹಾಗೂ 50 ಎಕರೆ ಭೂಪ್ರದೇಶದಲ್ಲಿ ಅಂತಾರಾಷ್ಟ್ರೀಯ ವಿಶ್ವವಿದ್ಯಾನಿಲಯವನ್ನು ನಿರ್ಮಿಸಲಿದ್ದರೆ ಎಂದು ಮೂಲಗಳು ತಿಳಿಸಿವೆ.
ಪತಂಜಲಿ ಶೈಕ್ಷಣಿಕ ಸಂಸ್ಥೆಯು ಮುಂದಿನ 5 ವರ್ಷಗಳಲ್ಲಿ ಸ್ಥಾಪನೆಯಾಗಲಿದ್ದು, ಪೂರ್ವ ಮತ್ತು ಪಾಶ್ಚಿಮಾತ್ಯ ಚಿಂತನೆಗಳ ಮಿಶ್ರಣ ಇರಲಿದೆ ಎಂದು ಪತಂಜಲಿ ಯೋಗಪೀಠ ಹೇಳಿದೆ.
ರಾಮ್ದೇವ್ ಅವರ ಸಹಾಯಕ ಆಚಾರ್ಯ ಬಾಲಕೃಷ್ಣ 165 ಕಿ.ಮೀ. ಎಕ್ಸ್ಪ್ರೆಸ್ವೇ ಭೂಪ್ರದೇಶಕ್ಕೆ ಭೇಟಿ ನೀಡಿದ್ದು, ಭೂಹಂಚಿಕೆಗೆ ಶೀಘ್ರವೇ ಅರ್ಜಿ ಸಲ್ಲಿಸಲಿದ್ದೇವೆ ಎಂದು ಪತಂಜಲಿ ಯೋಗಪೀಠದ ವಕ್ತಾರ ಎಸ್.ಕೆ. ತಿಜರಾವಾಲಾ ಹೇಳಿದ್ದಾರೆ.
Yeida ರೂ.4000 ಪ್ರತಿ ಚದರ ಮೀಟರ್ ದರದಲ್ಲಿ ಭೂಮಿ ನೀಡಲಿದೆ ಎಂದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.