ಚೆನ್ನೈ: ಶಾಲೆಗಳ ಆಸುಪಾಸಿನಲ್ಲಿ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ದಾಳಿ ನಡೆಸಿ ತಂಬಾಕುಗಳನ್ನು ವಶಪಡಿಸಿಕೊಳ್ಳುವಂತೆ ಮದ್ರಾಸ್ ಹೈಕೋರ್ಟ್ ಸೋಮವಾರ ಆದೇಶಿಸಿದೆ.
ಶಾಲೆ-ಕಾಲೇಜು ಇರುವ ಪ್ರದೇಶದ 100 ಯಾರ್ಡ್ಗಳಷ್ಟು ವ್ಯಾಪ್ತಿಯಲ್ಲಿ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುತ್ತಿರುವ ಅಂಗಡಿಗಳ ಮೇಲೆ ದಾಳಿ ನಡೆಸುವಂತೆ ತಿಳಿಸಲಾಗಿದೆ.
ಈ ನಿರ್ದೇಶನವನ್ನು ಪಾಳಿಸಲು ಜೂನ್ 20 ರವರೆಗೆ ನ್ಯಾಯಾಲಯ ಸಮಯಾವಕಾಶ ನೀಡಿದೆ. ಅಲ್ಲದೇ ಸಾರ್ವಜನಿಕವಾಗಿ ಸಿಗರೇಟು ಸೇದುವವರ ವಿರುದ್ಧ ಪ್ರಕರಣ ದಾಖಲಿಸಲು ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.