ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪ್ರಮಾಣಪತ್ರಗಳ ಬಹಿರಂಗಕ್ಕೆ ಆಗ್ರಹಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಇದೀಗ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಅವರು ಟಾಂಗ್ ನೀಡಲು ಮುಂದಾಗಿದ್ದಾರೆ.
ಕೇಜ್ರಿವಾಲ್ ಅವರು ಐಐಟಿ ಖರಗ್ಪುರಕ್ಕೆ ಪ್ರವೇಶಾತಿ ಪಡೆದುಕೊಂಡ ಬಗೆಗಿನ ದಾಖಲೆಗಳನ್ನು ಬಹಿರಂಗಪಡಿಸಬೇಕು ಎಂದು ಸ್ವಾಮಿ ಆಗ್ರಹಿಸಿದ್ದಾರೆ.
ಕೇಜ್ರಿವಾಲ್ ಅವರು 1980ರಲ್ಲಿ ಐಐಟಿ ಖರಗ್ಪುರಕ್ಕೆ ಪ್ರವೇಶ ಪಡೆದುಕೊಂಡಿದ್ದು, ಬಿಟೆಕ್ ಪದವಿ ಪಡೆದುಕೊಂಡಿದ್ದರು.
ಇದೀಗ ಅವರ ಪ್ರವೇಶಾತಿ, ಜಾಯಿಂಟ್ ಎಂಟ್ರೆನ್ಸ್ ಎಕ್ಸಾಂ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅವರು ಪಡೆದುಕೊಂಡ ಆಲ್ ಇಂಡಿಯಾ ರ್ಯಾಂಕ್ಗಳನ್ನು ಬಹಿರಂಗಪಡಿಸುವಂತೆ ಐಐಟಿ ಖರಗ್ಪುರ್ಗೆ ಆರ್ಟಿಐ ಮೂಲಕ ಸ್ವಾಮಿ ಕೇಳಿಕೊಂಡಿದ್ದಾರೆ.
ಆದರೆ ಈ ಬಗೆಗಿನ ಮಾಹಿತಿ ಲಭ್ಯವಾಗಿಲ್ಲ ಎಂದು ಐಐಟಿ ಹೇಳಿದೆ ಎನ್ನಲಾಗಿದೆ. ಆದರೆ ರೋಲ್ ನಂಬರ್ ಸೇರಿದಂತೆ ಕೆಲವೊಂದು ಇತರ ಮಾಹಿತಿಗಳನ್ನು ನೀಡಲಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.