ನವದೆಹಲಿ : ಆರ್ಥಿಕ ಸಂಕಷ್ಟಕ್ಕೀಡಾಗಿ ಸ್ಥಗಿತಗೊಂಡಿದ್ದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಪುನರಾರಂಭಿಸಲು ಕಾಂಗ್ರೆಸ್ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.
8 ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ನ್ಯಾಷನಲ್ ಹೆರಾಲ್ಡ್ ಮತ್ತು ಇತರೆ ಎರಡು ಪತ್ರಿಕೆಗಳಾದ ಹಿಂದಿ ದಿನಪತ್ರಿಕೆ ನವಜೀವನ್, ಉರ್ದು ಭಾಷೆಯ ಕ್ವಾಮಿ ಅವಾಜ್ ಪತ್ರಿಕೆಗಳನ್ನು ಪುನರಾರಂಭಿಸುವ ಯೋಚನೆ ಹೊಂದಿರುವ ಕಾಂಗ್ರೆಸ್, ಸದ್ಯದಲ್ಲೇ ನಿರ್ದೇಶಕರ ಮಂಡಳಿ ಸಭೆ ನಡೆಸಿ, ಸಂಪಾದಕರ ನಿಯುಕ್ತಿ ಮಾಡಲಿದೆ ಎನ್ನಲಾಗಿದೆ.
ಮುಂದಿನ ವಾರದೊಳಗೆ ಈ ಕುರಿತು ಅಧಿಕೃತ ಘೋಷಣೆ ಮಾಡಲಾಗುವುದೆಂದು ಮೂಲಗಳಿಂದ ತಿಳಿದಿದೆ.
ಆದರೆ ದಿನಪತ್ರಿಕೆಯ ರೂಪದಲ್ಲೇ ಪ್ರಕಟಿಸಬೇಕೇ ಅಥವಾ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಸುದ್ದಿಗಳನ್ನು ಪ್ರಸಾರ ಮಾಡಬೇಕೆ ಎಂಬುದರ ಬಗ್ಗೆ ಇನ್ನೂ ತೀರ್ಮಾನ ತೆಗೆದುಕೊಳ್ಳಲಾಗಿಲ್ಲ. ಕೆಲ ತಿಂಗಳ ಹಿಂದೆ ಅಸೋಸಿಯೇಟೆಡ್ ಜರ್ನಲ್ ಲಿಮಿಟೆಡ್ ನಡೆಸಿದ ಮಹತ್ವದ ಸಭೆಯಲ್ಲಿ ಈ ಮೂರು ಪತ್ರಿಕೆಗಳನ್ನು ಪುನರಾರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗಿತ್ತು.
ಇದಲ್ಲದೆ, ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯಗಳಿಂದ ದಾಖಲೆಗಳು ಮತ್ತು ಕಾಂಗ್ರೆಸ್ ಪಕ್ಷದ 2010-11ರ ಸಾಲಿನ ಬ್ಯಾಲೆನ್ಸ್ ಶೀಟ್ ತರಿಸುವಂತೆ ವಿಚಾರಣಾ ನ್ಯಾಯಾಲಯವು ಆದೇಶಿಸಿದ್ದನ್ನು ಇಂದು ದೆಹಲಿ ಹೈಕೋರ್ಟ್ ತಳ್ಳಿ ಹಾಕಿದ್ದು ಇದರಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತಿನ್ನಿತರರಿಗೆ ನಿರಾಳತೆ ಲಭಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.