News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸುವಂತೆ ಕ್ಯಾ. ಕಾರ್ಣಿಕ್ ಆಗ್ರಹ

Karnikಮಂಗಳೂರು : ರಾಜ್ಯ ಶಿಕ್ಷಕರೆಲ್ಲರೂ ಕಾತರದಿಂದ ಎದುರು ನೋಡುತ್ತಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಶೈಕ್ಷಣಿಕ ವರ್ಷ ಪ್ರಾರಂಭವಾಗಿ 2 ತಿಂಗಳಾದರು ನಡೆಯದಿರುವುದು ಶಿಕ್ಷಕರ ಆತಂಕಕ್ಕೆ ಕಾರಣವಾಗಿದೆ. ವರ್ಗಾವಣೆಯ ಭರವಸೆಯ ನೆಲೆಯಲ್ಲಿ ಅನೇಕ ಸಾಂಸಾರಿಕ ವಿಷಯಗಳನ್ನು ಜೋಡಿಸಿಕೊಂಡಿದ್ದ ಶಿಕ್ಷಕರು ಇನ್ನಾದರೂ ವರ್ಗಾವಣೆ ಪ್ರಕ್ರಿಯೆ ಪ್ರಾರಂಭವಾಗಬಹುದೆಂಬ ಆಶಾವಾದದೊಂದಿಗೆ ಶಿಕ್ಷಣ ಇಲಾಖೆಯ ನಿರ್ಣಯಕ್ಕಾಗಿ ಕಾದಿರುತ್ತಾರೆ.

ಪ್ರಸ್ತುತ ಇರುವ ವರ್ಗಾವಣೆಯ ಮಾನದಂಡದ ಅನುಸಾರವೇ ಈ ಸಾಲಿನಲ್ಲಿ ವರ್ಗಾವಣೆ ಪ್ರಕ್ರಿಯೆಯನ್ನು ಜರೂರಾಗಿ ಕೈಗೆತ್ತಿಕೊಂಡು ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಶಿಕ್ಷಕರಿಗೆ, ಅಂಗವಿಕಲತೆ ಹಾಗೂ ದೈಹಿಕ ಸಮಸ್ಯೆಗಳಿಂದ ಬಳಲುತ್ತಿರುವ ಶಿಕ್ಷಕರಿಗೆ, ದಂಪತಿ ಪ್ರಕರಣಗಳಿಗೆ ಹಾಗೂ ಅನೇಕ ವರ್ಷಗಳಿಂದ ಹೊರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಅಗತ್ಯ ನ್ಯಾಯ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿರುತ್ತಾರೆ.

ವರ್ಗಾವಣೆ ಮಾನದಂಡಗಳಲ್ಲಿ ಇರುವ ಲೋಪದೋಷಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಶಿಕ್ಷಕ, ಪದವೀಧರ ಕ್ಷೇತ್ರದ ಪ್ರತಿನಿಧಿಗಳೊಂದಿಗೆ ಚರ್ಚಿಸಿ ವರ್ಗಾವಣೆ ನಿಯಮಾವಳಿಗಳನ್ನು ರೂಪಿಸಲು ಅಗತ್ಯ ಕ್ರಮ ಕೈಗೊಂಡು ಮುಂದಿನ ವರ್ಷದಿಂದ ಹೊಸ ನಿಯಮಾವಳಿಯಂತೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಮೊದಲೇ ವರ್ಗಾವಣೆ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸುವಂತೆ ಮಾನ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್‌ರವರು ಆಗ್ರಹಿಸಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top