ಮುಂಬಯಿ: ಸಮಾಜದಲ್ಲಿ ಸಾಮಾಜಿಕ ಬದಲಾವಣೆಗೆ ಶಿಕ್ಷಣ ಒಂದು ಮೂಲವಾಗಿದೆ. ಹೊಸ ಶಿಕ್ಷಣ ನೀತಿಯ ಕರಡು ಅಂತಿಮ ಹಂತ ತಲುಪಿದ್ದು, ಗುಣಮಟ್ಟದ ಶಿಕ್ಷಣದತ್ತ ಹೆಚ್ಚು ಒತ್ತು ನೀಡಲಾಗುವುದು ಎಂದು ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಶಿಕ್ಷಣ ನೀತಿಯ ಕರಡಿಗೆ ಸಲಹೆಗಳು ಮತ್ತು ಅಭಿಪ್ರಾಯಗಳನ್ನು ಕಳುಹಿಸುವ ಗಡುವನ್ನು ಸೆಪ್ಟೆಂಬರ್ 15ರ ವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.
ಮುಂಬಯಿಯ ರಿಯಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು, ಪ್ರಾಥಮಿಕ ಶಾಲೆಗಳಿಂದ ಐಐಟಿ ವರೆಗೆ 20 ಲಕ್ಷ ಶಿಕ್ಷಕ ವೃತ್ತಿ ಖಾಲಿ ಇದ್ದು, ವಿದ್ಯಾರ್ಥಿಗಳು ಇಂಜಿನಿಯಿಂಗ್ ಮತ್ತು ವೈದ್ಯಕೀಯ ಕ್ಷೇತ್ರವನ್ನು ಮಿತಿಯಾಗಿರಿಸದೆ ಬೋಧಕ ವೃತ್ತಿಯನ್ನೂ ಆಯ್ಕೆ ಮಾಡಬೇಕು ಎಂದು ಹೇಳಿದ್ದಾರೆ.
ಪ್ರತಿಯೊಬ್ಬರೂ ಶಿಕ್ಷಣ ಪಡೆಯುವಂತೆ ಆಗಲು ಸಮಾಜ ಸಕ್ರಿಯವಾಗಿ ಭಾಗವಿಸುವುದು ಅಗತ್ಯ. ಶಕ್ಷಣ ನೀತಿಯು ಸಮಕಾಲೀನ ವಾಸ್ತವಾಂಶಗಳೊಂದಿಗೆ ಹೊಸ ಪೀಳಿಗೆಯ ಆಕಾಂಕ್ಷೆಗಳನ್ನು ಹೊಂದುವಂತಿರಬೇಕು ಎಂದು ಜಾವಡೇಕರ್ ತಿಳಿಸಿದ್ದಾರೆ.
ಕಾರ್ಯಕ್ರಮದ ಸಂದರ್ಭ ಜಾವಡೇಕರ್ ಅವರು ಮಹಾರಾಷ್ಟ್ರ ಮಂಡಳಿಯ ಎಸ್ಎಸ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸಹಾಯಧನವನ್ನು ವಿತರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.