ಬೆಂಗಳೂರು : ಕಷ್ಟಗಳನ್ನು ಎದುರಿಸುವ ಧೈರ್ಯವಿದ್ದರೆ ನಾವು ವಿಜಯಿಗಳಾಗಿ ಹೊರಹೊಮ್ಮುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬುದಕ್ಕೆ ವಿಶ್ವಾಸ್ ಕೆ. ಎಸ್. ಅವರೇ ಜೀವಂತ ಸಾಕ್ಷಿ.
ಬೆಂಗಳೂರಿನ 20 ವರ್ಷದ ವಿಶ್ವಾಸ್ ಕೈಗಳಲಿಲ್ಲದಿದ್ದರೂ ಭಾರತದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. ಕೆನಡಾದಲ್ಲಿ ಕಳೆದ ವಾರ ನಡೆದ 2016ರ ಕ್ಯಾಂ-ಆಮ್ ಸ್ಪೀಡೋ ಸ್ವಿಮ್ಮಿಂಗ್ ಚಾಂಪಿಯನ್ಶಿಪ್ನಲ್ಲಿ 3 ಪದಕಗಳನ್ನು ಗೆದ್ದಿದ್ದಾರೆ.
100 ಮೀ. ಬ್ಯಾಕ್ಸ್ಟ್ರೋಕ್, ಬ್ರೆಡ್ತ್ ಸ್ಟ್ರೋಕ್ ವಿಭಾಗಗಳಲ್ಲಿ ಬೆಳ್ಳಿ ಪದಕ ಮತ್ತು 50 ಮೀ. ಬಟರ್ಫ್ಲೈ ವಿಭಾಗದಲ್ಲಿ ಕಂಚನ್ನು ಗೆದ್ದುಕೊಂಡಿದ್ದಾರೆ. ಈ ಮೂಲಕ ಇತಿಹಾಸ ನಿರ್ಮಿಸಿದ ಭಾರತೀಯ ವಿಕಲಚೇತನ ಈಜುಪಟು ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ.
10 ವರ್ಷದವರಾಗಿದ್ದ ವೇಳೆ ಮನೆಯ ಮಹಡಿಯಿಂದ ಕುಸಿದು ವಿದ್ಯುತ್ ತಂತಿಯ ಮೇಲೆ ಬಿದ್ದ ಪರಿಣಾಮ ವಿಶ್ವಾಸ್ ಎರಡೂ ಕೈಗಳನ್ನು ಕಳೆದುಕೊಂಡಿದ್ದಾರೆ. ಆದರೆ ಈ ಘಟನೆ ಅವರನ್ನು ವಿಚಲಿತಗೊಳಿಸಲಿಲ್ಲ. ಬದಲಾಗಿ ಸಾಧಿಸುವ ಛಲವನ್ನು ಮತ್ತಷ್ಟು ಉತ್ತೇಜಿಸಿದೆ.
ಈಜಿನಲ್ಲಿ ತರಬೇತಿ ಪಡೆದ ಅವರು ನಿರಂತರ ಅಭ್ಯಾಸ ಮತ್ತು ಪರಿಶ್ರಮಗಳ ಮೂಲಕ ಬ್ರೆಡ್ತ್ಸ್ಟ್ರೋಕ್, ಬ್ಯಾಕ್ಸ್ಟ್ರೋಕ್, ಬಟರ್ಫ್ಲೈ ವಿಭಾಗಗಳಲ್ಲಿ ಮಾಸ್ಟರ್ ಆಗಿ ಹೊರಹೊಮ್ಮಿದ್ದಾರೆ.
ಬೆಳಗಾವಿಯಲ್ಲಿ ನಡೆದ ಪ್ಯಾರಾ ಸ್ವಿಮ್ಮಿಂಗ್ ಚಾಂಪಿಯನ್ಶಿಪ್ನಲ್ಲಿ 3 ಚಿನ್ನದ ಪದಕ ಗೆದ್ದ ಬಳಿಕ ಅವರು ಕೆನಡಾದಲ್ಲಿನ ಸ್ಪರ್ಧೆಗೆ ಆಯ್ಕೆಗೊಂಡಿದ್ದರು.
ಇದೀಗ 2020 ರಲ್ಲಿ ನಡೆಯುವ ಟೋಕಿಯೋ ಒಲಿಂಪಿಕ್ಸ್ನಲ್ಲಿ ಭಾಗವಹಿಸಿ ದೇಶಕ್ಕೆ ಹೆಮ್ಮೆ ತರಬೇಕು ಎಂಬ ಕನಸು ಮತ್ತು ಗುರಿ ಹೊಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.