ನವದೆಹಲಿ: ಭಾರತ ಮತ್ತು ಪಾಕಿಸ್ಥಾನದ ನಡುವಿನ ಆತಂಕಗಳು ಹೆಚ್ಚುತ್ತಿದ್ದು, ಯಾವುದೇ ಸಂದರ್ಭದಲ್ಲೂ ಪಾಕಿಸ್ಥಾನವನ್ನು ಹತ್ತಿಕ್ಕಲು ಭಾರತ ಸಂಪೂರ್ಣ ತಯಾರಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರದ ಉರಿ ಸೆಕ್ಟರ್ನ ಸೇನಾ ನೆಲೆ ಮೇಲೆ ಸೆಪ್ಟೆಂಬರ್ 18ರ ಉಗ್ರರ ದಾಳಿ ಮತ್ತು ಸೆಪ್ಟೆಂಬರ್ 29ರಂದು ಭಾರತೀಯ ಸೇನೆ ಪ್ರತೀಕಾರವಾಗಿ ಉಗ್ರರ ನೆಲೆ ಮೇಲೆ ನಡೆಸಿದ ಸೀಮಿತ ದಾಳಿ ನಂತರ ಗಡಿ ನಿಯಂತ್ರಣ ರೇಖೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ಭಾರತ ತನ್ನ ಸೇನಾ ಕಾರ್ಯಾಚರಣೆಯನ್ನು ಯಶಸವಿಯಾಗಿ ನಡೆಸಿದೆ. ಡಿಜಿಎಂಒ ಈಗಾಗಲೇ ತಮ್ಮ ಹೇಳಿಕೆಯಲ್ಲಿ ಎಲ್ಲ ವಿವರಗಳನ್ನು ನೀಡಿದ್ದಾರೆ. ಇದು ಭದ್ರತೆಯ ಅತೀ ಸೂಕ್ಮ ವಿಚಾರವಾಗಿದೆ ಎಂದು ಪರಿಕ್ಕರ್ ಹೇಳಿದ್ದಾರೆ.
ಪಾಕಿಸ್ಥಾನದ ಜೊತೆ ಚೀನಾದ ಸಂಬಂಧಗಳ ಕುರಿತು ಬೆಳಕು ಚೆಲ್ಲಿದ ಅವರು, ಒಂದು ದೇಶ ಮತ್ತೊಂದು ದೇಶದ ಜೊತೆ ಸಾಮೀಪ್ಯ ಹೊಂದಿರೂ ಬೇರೆ ರಾಷ್ಟ್ರಗಳೊಂದಿಗೆ ಸಂಬಂಧ ವೃದ್ಧಿಸುವುದಿಲ್ಲ ಎಂದೇನಿಲ್ಲ. ಅದು ಇತರ ರಾಷ್ಟ್ರಗಳೊಂದಿಗೂ ಉತ್ತಮ ಸಂಬಂಧ ನಿರ್ವಹಿಸಬಹುದು. ಇತ್ತೀಚಿನ ವರ್ಷಗಳಲ್ಲಿ ಚೀನಾದೊಂದಿಗೆ ಭಾರತದ ಸಂಬಂಧ ಸುಧಾರಣೆಯಾಗುತ್ತಿದೆ ಎಂದು ಹೇಳಿದ್ದಾರೆ.
ಕೆಲವು ಸಮಸ್ಯೆಗಳ ಬಗ್ಗೆ ಕಾಳಜಿ ವಹಿಸುತ್ತಿದ್ದು, ಭಾರತ-ಚೀನಾ ಗಡಿ ನಿರ್ವಹಣೆ ಉತ್ತಮವಾಗಿದೆ. ವಿಶ್ವಾಸಾರ್ಹ, ಪ್ರಬಲ ಕ್ರಮಗಳನನು ಕೈಗೊಳ್ಳುವ ಯೋಜನೆ ಇದೆ ಎಂದು ಪರಿಕ್ಕರ್ ಹೇಳೀದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.