ನವದೆಹಲಿ: ಕೇಂದ್ರ ಸರ್ಕಾರ ನವೆಂಬರ್ 8ರಂದು ನೋಟು ನಿಷೇಧ ಮಾಡಿದ ನಂತರ 700 ಮಾವೋವಾದಿಗಳು ಶರಣಾಗಿದ್ದಾರೆ ಮತ್ತು ನೋಟು ನಿಷೇಧ ಜಗತ್ತಿನಲ್ಲೇ ಅತಿ ದೊಡ್ಡ ನಿರ್ಧಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸಿ ಮಾತನಾಡಿದ ಪ್ರಧಾನಿ ಮೋದಿ, ಮಾವೋವಾದಿಗಳು ಕಳೆದ ನವೆಂಬರ್, ಡಿಸೆಂಬರ್ ತಿಂಗಳಿನಲ್ಲೇ ಶರಣಾಗಿದ್ದು, ಈ ಪ್ರಕ್ರಿಯೆ ಮುಂದುವರೆದಿದೆ ಎಂದು ಹೇಳಿದ್ದಾರೆ.
ನೋಟು ನಿಷೇಧದಿಂದ ದೇಶದಲ್ಲಿ ವಿಭಜನೆಯಾಗಿದ್ದು, ಜನರು ಒಂದು ಕಡೆ ಆದರೆ ರಾಜಕೀಯ ನಾಯಕರು ಒಂದು ಕಡೆ ಆಗಿದ್ದಾರೆ. ನಾಯಕರು ಜನರಿಂದ ಬೇರ್ಪಟ್ಟಿದ್ದಾರೆ. ಆದರೆ ಸರ್ಕಾರ ಮತ್ತು ಜನತೆ ಜೊತೆಯಾಗಿದ್ದಾರೆ ಎಂದು ಹೇಳಿದ್ದಾರೆ.
ಸಮಾನ ಆರ್ಥಿಕತೆಯಿಂದ ಬಡವರು ಸಮಸ್ಯೆ ಎದುರಿಸುತ್ತಿದ್ದು, ಪ್ರಾಮಾಣಿಕರ ಉಪಯೋಗಕ್ಕಾಗಿ ಅನಾಣ್ಯೀಕರಣದಂತಹ ನಿರ್ಧಾರ ಕೈಗೊಳ್ಳಲಾಗಿದೆ. ಅರ್ಥಶಾಸ್ತ್ರಜ್ಞರು ಇದರ ಪರಿಣಾಮಗಳ ಬಗ್ಗೆ ಅಧ್ಯಯನ ನಡೆಸಲಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ಇದೇ ವೇಳೆ ಪಾಕಿಸ್ಥಾನವನ್ನು ‘ಶತ್ರು ರಾಷ್ಟ್ರ’ ಎಂದು ಕರೆದ ಅವರು, ನೋಟು ನಿಷೇಧದಿಂದ ಅಲ್ಲಿಯ ನಕಲಿ ನೋಟು ವ್ಯಾಪಾರಿಯೊಬ್ಬ ಆತ್ಮಹತ್ಯೆ ಮಾಡಿರುವ ಬಗ್ಗೆ ಸುದ್ದಿ ವಾಹಿನಿಗಳಲ್ಲಿ ತೋರಿಸಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ಹತ್ಯೆಗೈದ ಭಯೋತ್ಪಾದಕರ ಬಳಿ ನಕಲಿ ನೋಟು ಪತ್ತೆಯಾಗಿತ್ತು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.