ಅಗರ್ತಲಾ: ತ್ರಿಪುರಾದ ಎಲ್ಲ ಶಾಲಾ ವಿದ್ಯಾರ್ಥಿಗಳು ಉತ್ತಮ ಆರೋಗ್ಯದ ಪ್ರಯೋಜನಗಳನ್ನು ಪಡೆಯಲು ತ್ರಿಪುರಾ ಸರ್ಕಾರವು ಟಾಟಾ ಟ್ರಸ್ಟ್ನ ಸಹಯೋಗದಲ್ಲಿ ಮಧ್ಯಾಹ್ನದ ಪೌಷ್ಠಿಕ ಆಹಾರ ವಿತರಣಾ ಯೋಜನೆ ಆರಂಭಿಸಿದೆ.
ಮಕ್ಕಳ ಸಾವಿಗೆ ಪ್ರಮುಖ ಕಾರಣವಾಗಿರುವ ಕುಂಠಿತ ಬೆಳವಣಿಗೆ, ಬೊಜ್ಜುತನ, ರಕ್ತಹೀನತೆ ಮುಂತಾದ ರೋಗಗಳನ್ನು ತಡೆಗಟ್ಟಲು ಈ ಯೋಜನೆಯಡಿ ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಿಸಲಾಗುವುದು ಎಂದು ತ್ರಿಪುರಾ ಶಿಕ್ಷಣ ಸಚಿವ ತಪನ್ ಚಕ್ರವರ್ತಿ ಹೇಳಿದ್ದಾರೆ.
ಆಹಾರದಲ್ಲಿ ಕಬ್ಬಿಣದ ಅಂಶದ ಕೊರತೆಯಿಂದ ಶೇ. ೭೦ರಷ್ಟು ಮಕ್ಕಳು ಹಾಗೂ ಶೇ. ೫೦ರಷ್ಟು ಮಹಿಳೆಯರು ರಕ್ತದೊತ್ತಡ, ರಕ್ತಹೀನತೆ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ನ್ಯಾಶನಲ್ ಸರ್ವೇ ಅಂಕಿ ಅಂಶಗಳಿಂದ ತಿಳಿದು ಬಂದಿದೆ.
ಮೊದಲ ಹಂತದಲ್ಲಿ ಮಕ್ಕಳ ಅಭಿವೃದ್ಧಿ ಯೋಜನಯಡಿ ಮಧ್ಯಾಹ್ನದ ಊಟಕ್ಕೆ ಬಳಸಲಾಗುವ ಉಪ್ಪನ್ನು ದುಪ್ಪಟ್ಟು ಶುದ್ಧೀಕರಿಸಲು ನಿರ್ಧರಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.