ಗುವಾಹಟಿ(ಅಸ್ಸಾಂ): ಅಸ್ಸಾಂನಲ್ಲಿ ಬಾಂಗ್ಲಾದಿಂದ ಬರುವ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಪರಿಣಾಮ ಸ್ಥಳೀಯರೇ ಅಲ್ಪಸಂಖ್ಯಾತರಾಗುತ್ತಿದ್ದಾರೆ ಎಂದು ಅಸ್ಸಾಂನ ವಿತ್ತ ಸಚಿವ ಹಿಮಂತಾ ಬಿಸ್ವಾ ಶರ್ಮಾ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವಾಲಯದ ರಾಜ್ಯ ಸಚಿವ ಕಿರಣ್ ರಿಜಿಜು ಅವರು ನೀಡಿದ್ದ ಹಿಂದೂಗಳ ಸಂಖ್ಯೆ ಕ್ಷೀಣಿಸುತ್ತಿದೆ ಎಂಬ ಮಾತಿಗೆ ಬೆಂಬಲ ವ್ಯಕ್ತಪಡಿಸಿರುವ ಅವರು, ಹಿಂದು ಎಂಬುದು ಕೇವಲ ಧರ್ಮವಲ್ಲ, ಅದೊಂದು ಸಂಸ್ಕೃತಿ ಎಂದಿದ್ದಾರೆ.
ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಹಿಂದು ಸಂಸ್ಕೃತಿ ಇನ್ನೊಂದು ಧರ್ಮವನ್ನು ಮತಾಂತರ ಮಾಡುವ ಗುಣ ಹೊಂದಿಲ್ಲ. ಆದರೆ ಅನ್ಯ ದೇಶಗಳಿಂದ ಅಕ್ರಮವಾಗಿ ಸೇರಿಕೊಳ್ಳುವವರ ಸಂಖ್ಯೆ ಅಧಿಕವಾಗುತ್ತಿರುವ ಪರಿಣಾಮ ಹಿಂದುಗಳು ಸಂಖ್ಯೆ ಕಡಿಮೆ ಎನಿಸುತ್ತಿದೆ ಎಂದು ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.
ಅರುಣಾಚಲ ಪ್ರದೇಶವನ್ನು ಹಿಂದು ರಾಜ್ಯವನ್ನಾಗಿ ಮಾಡಲು ಮೋದಿ ಯತ್ನಿಸುತ್ತಿದ್ದಾರೆ ಎಂಬ ಕಾಂಗ್ರೆಸ್ನ ಆರೋಪಕ್ಕೆ, ಕಿರಣ್ ರಿಜಿಜು ಕಳೆದ ಎರಡು ದಿನಗಳ ಹಿಂದೆ ಪ್ರತಿಕ್ರಿಯಿಸಿದ್ದರು. ಇದೀಗ ಶರ್ಮಾ ಅವರು ಕಿರಣ್ ಅವರ ಮಾತನ್ನು ಬೆಂಬಲಿಸುತ್ತಲೇ, ಅಸ್ಸಾಂನಲ್ಲಿ ಬಾಂಗ್ಲಾ ನುಸುಳುಕೋರರ ಸಂಖ್ಯೆ ಅಧಿಕವಾಗುತ್ತಿರುವ ಕುರಿತು ಸೂಚ್ಯವಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.