ಮೀರತ್: ಭ್ರಷ್ಟರ ವಿರುದ್ಧ ಸಮರ ಸಾರಿದ್ದ ಮೀರತ್ನ ಜಿಲ್ಲಾಧಿಕಾರಿ ಬಿ.ಚಂದ್ರಕಲಾ ಅವರು ಇದೀಗ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ತಂಡದ ಭಾಗವಾಗಿದ್ದಾರೆ.
2008ರ ಐಎಎಸ್ ಆಫೀಸರ್ ಬ್ಯಾಚ್ನ ಯುಪಿ ಕೇಡರ್ನ ಚಂದ್ರಕಲಾ ಅವರು, ಮೀರತ್ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಕಳಪೆ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುತ್ತಿದ್ದ ಕಾಂಟ್ರ್ಯಾಕ್ಟರ್ ಮತ್ತು ನಗರಪಾಲಿಕೆ ಅಧಿಕಾರಿಗಳನ್ನು ಸಾರ್ವಜನಿಕರ ಎದುರಲ್ಲೇ ತರಾಟೆಗೆ ತೆಗೆದುಕೊಂಡು ಭಾರೀ ಖ್ಯಾತಿ ಗಳಿಸಿದ್ದರು.
ಅವರ ಪ್ರಾಮಾಣಿಕ ಕಾರ್ಯಕ್ಕೆ ತಕ್ಕ ಪ್ರತಿಫಲ ಇದೀಗ ದೊರೆತಿದೆ.
ಇದೀಗ ಅವರನ್ನು ‘ಸ್ವಚ್ಛ ಭಾರತ ಅಭಿಯಾನ’ದ ನಿರ್ದೇಶಕಿಯನ್ನಾಗಿ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಸಚಿವಾಲಯದ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ಬುಲಂದ್ಶಹರ್, ಬಿಜನೋರ್, ಮೀರತ್ಗಳಲ್ಲಿ ಜಿಲ್ಲಾಧಿಕಾರಿಯಾಗಿದ್ದ ವೇಳೆ ಇವರು ಸ್ವಚ್ಛ ಭಾರತಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದರು. ಬಿಜ್ನೋರ್ನ್ನು ಬಯಲುಶೌಚ ಮುಕ್ತಗೊಳಿಸಿದ್ದು ಇವರ ಸಾಧನೆ.
ಅವರ ಕಾರ್ಯವನ್ನು ಶ್ಲಾಘಿಸಿರುವ ಕೇಂದ್ರ ಅವರಿಗೆ ಉನ್ನತ ಸ್ಥಾನ ನೀಡಿ ಗೌರವಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.