ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಏಕತೆ ಮತ್ತು ಸಂಘಟನೆಯನ್ನು ಬಲಪಡಿಸುವ ಪ್ರಯತ್ನದೊಂದಿಗೆ ಪಶ್ಚಿಮ ಬಂಗಾಳದಲ್ಲಿ ಎಪ್ರಿಲ್ 5 ರಂದು ಬಿಜೆಪಿ ಬೆಂಬಲದೊಂದಿಗೆ ರಾಮನವಮಿ ಉತ್ಸವವನ್ನು ಅದ್ದೂರಿಯಾಗಿ ಆಚರಿಸಲು RSS ಮತ್ತು VHP ಯೋಜನೆ ರೂಪಿಸಿದೆ.
ರಾಮನವಮಿ ಧಾರ್ಮಿಕ ಹಬ್ಬವಾಗಿದೆ. ಆದರೆ ನಾವು ಮೂಲಭೂತವಾದಿ ಶಕ್ತಿಗಳ ವಿರುದ್ಧ ಅವರನ್ನು ಸಂಘಟಿಸಿ, ಒಗ್ಗೂಡಿಸುವ ಯೋಜನೆ ಹೊಂದಿದ್ದೇವೆ ಎಂದು RSS ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.
ಮೂಲಭೂತವಾದಿ ಶಕ್ತಿಗಳು ಬಂಗಾಳದಲ್ಲಿ ಹೆಚ್ಚುತ್ತಿವೆ. ಒಳನುಸುಳುವಿಕೆ ಮತ್ತು ಅತಿಕ್ರಮಣ ಹಲವು ಗಡಿ ಜಿಲ್ಲೆಗಳಲ್ಲಿ ಜನಸಂಖ್ಯಾ ಅಸಮತೋಲನಕ್ಕೆ ಕಾರಣವಾಗಿದೆ ಎಂದು ಪ.ಬಂಗಾಳ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ RSS ಸಂಘಟನಾ ಕಾರ್ಯದರ್ಶಿ ಬಿದ್ಯುತ್ ಮುಖರ್ಜಿ ಹೇಳಿದ್ದಾರೆ.
ಈ ಹಿಂದೆ ಜಿಹಾದಿ ಚಟುವಟಿಕೆ ಮತ್ತು ಹಿಂದೂಗಳ ಜನಸಂಖ್ಯೆ ಕುಸಿತಕ್ಕೆ ಕಾಳಜಿ ವಹಿಸುವಂತೆ RSS ಕೊಯಮತ್ತೂರಿನ ಅಖಿಲ ಭಾರತೀಯ ಪ್ರತಿನಿಧಿ ಸಭೆಯಲ್ಲಿ ನಿರ್ಣಯ ಕೈಗೊಂಡಿತ್ತು.
RSS ಇಂತಹ ಕಾರ್ಯಕ್ರಮಕ್ಕೆ ಬೆಂಬಲಿಸುವುದಾಗಿ ಹೇಳಿದ ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ಇದು ರಾಷ್ಟ್ರ ವಿರೋಧಿ ಚಟುವಟಿಕೆ ಮತ್ತು ವೋಟ್ ಬ್ಯಾಂಕ್ ರಾಜಕಾರಣದ ವಿರುದ್ಧ ಜನರನ್ನು ಒಗ್ಗೂಡಿಸಲು ಸಹಾಯವಾಗಲಿದೆ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.