ನವದೆಹಲಿ: ಅರೆಸೇನಾ ಸಿಬ್ಬಂದಿಗಳಿಗಾಗಿ ಕುಂದು ಕೊರತೆಗಳ ಪರಿಹಾರಕ್ಕೆ ಸಂಬಂಧಪಟ್ಟ ಮೊಬೈಲ್ ಆಧಾರಿತ ಅಪ್ಲಿಕೇಶನವೊಂದನ್ನು ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಬಿಡುಗಡೆಗೊಳಿಸಿದರು.
ಇತ್ತೀಚಿಗೆ ಕೆಲ ಯೋಧರು ತಮ್ಮ ಕಷ್ಟಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದರು. ಇದು ದೊಡ್ಡ ವಿವಾದವನ್ನು ಸೃಷ್ಟಿಸಿತ್ತು. ಈ ಹಿನ್ನಲೆಯಲ್ಲಿ ಈ ಅಪ್ಲಿಕೇಶನನ್ನು ಬಿಡುಗಡೆ ಮಾಡಲಾಗಿದೆ.
ತಮ್ಮ ಕುಂದುಕೊರೆತಗಳನ್ನು ಈ ಆಪ್ ಮೂಲಕ ನೇರವಾಗಿ ನಮ್ಮ ಸಚಿವಾಲಯಕ್ಕೆ ಕಳುಹಿಸಿಕೊಡಿ ಎಂದು ಅರೆಸೇನಾ ಸಿಬ್ಬಂದಿಗಳಿಗೆ ಸಿಂಗ್ ಮನವಿ ಮಾಡಿದ್ದಾರೆ.
ಕಾರ್ಯಾಚರಣೆಯ ವೇಳೆ ಮೃತಪಟ್ಟ ಪ್ರತಿಯೊಬ್ಬ ಯೋಧನ ಕುಟುಂಬಿಕರೂ ತಲಾ 1 ಕೋಟಿ ರೂಪಾಯಿಗಳ ಪರಿಹಾರ ಪಡೆಯುವಂತೆ ಮಾಡಲು ನಮ್ಮ ಸಚಿವಾಲಯ ಸಾಕಷ್ಟು ಪ್ರಯತ್ನಗಳನ್ನು ಮಾಡುತ್ತಿದೆ ಎಂದರು.
ಕೇಂದ್ರ ಶಸ್ತ್ರಾಸ್ತ್ರ ಪಡೆಗಳಾದ ಸಿಆರ್ಪಿಎಫ್, ಬಿಎಸ್ಎಫ್, ಸಿಐಎಸ್ಎಫ್, ಐಟಿಬಿಪಿ, ಎಸ್ಎಸ್ಬಿ ಈ ಕೇಂದ್ರೀಕೃತ ಅಪ್ಲಿಕೇಶನನ್ನು ಬಳಸಿಕೊಳ್ಳಬಹುದು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.