ಅಥಣಿ : ಶ್ರೀ ಸಿದ್ಧೇಶ್ವರ ಮೋಫತ ವಾಚನಾಲಯ ಅಥಣಿ ವತಿಯಿಂದ ದಿನಾಂಕ 17-11-2017 ರಂದು ಟಿಳಕ ಸ್ಮಾರಕ ಮಂದಿರ ಸ್ಮರಣೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
17-11-1917 ರಂದು ಶ್ರೀ ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರು ಅಥಣಿಗೆ ಭೇಟಿ ನೀಡಿದ್ದರು. ಅಂದು ಪೂಜ್ಯ ಶ್ರೀ ಮುರುಘೇಂದ್ರ ಶಿವಯೋಗಿಗಳ ಜೊತೆಗೆ ಸಂವಾದ, ಶ್ರೀ ಸಿದ್ಧೇಶ್ವರ ಮೋಫತ ವಾಚಲನಾಯದ ಸ್ಥಾಪನೆ ಕಾರ್ಯಗಳನ್ನು ಮಾಡಿದ್ದರು. ಇವೆಲ್ಲವೂ ಅಥಣಿಯ ಇತಿಹಾಸದಲ್ಲಿನ ಸಂಸ್ಮರಣೀಯ ಕ್ಷಣಗಳಾಗಿದ್ದು, ಇದೀಗ 100 ವರ್ಷಗಳು ಸಂದ ಹಿನ್ನೆಲೆಯಲ್ಲಿ ದಿನಾಂಕ 17-11-2017 ರಂದು ಸ್ಮರಣೋತ್ಸವ ಕಾರ್ಯಕ್ರಮವನ್ನು ಜೆ.ಎ. ಪದವಿಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ಏರ್ಪಡಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಲೋಕಮಾನ್ಯ ತಿಲಕ್ರ ಮರಿಮೊಮ್ಮಗ, ಪುಣೆಯ ತಿಲಕ ಮಹಾರಾಷ್ಟ್ರ ವಿದ್ಯಾಪೀಠ ಸ್ವಾಯತ್ತ ವಿಶ್ವವಿದ್ಯಾಲಯದ ಕುಲಪತಿಗಳು ಹಾಗೂ ಪುಣೆಯ ಕೇಸರಿ ಟ್ರಸ್ಟ್ ಅಧ್ಯಕ್ಷರೂ ಆದ ಡಾ. ದೀಪಕ್ ಟಿಳಕ್ ಅವರ ಉಪಸ್ಥಿತಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಗದಗದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಪ. ಪೂ. ಶ್ರೀ ನಿರ್ಭಯಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಅಥಣಿಯ ಶಾಸಕರಾದ ಲಕ್ಷ್ಮಣ ಸಂಗಪ್ಪಾ ಸವದಿ ಅವರು ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಅತಿಥಿಗಳಾಗಿ ಕೇಂದ್ರ ಸರ್ಕಾರದ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವರಾದ ರಮೇಶ್ ಜಿಗಜಿಣಗಿ ಅವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.