ನವದೆಹಲಿ: ಅಪ್ರತಿಮ ವಾಗ್ಮಿ, ವೇದಾಂತಗಳ ಸಿಡಿಲಮರಿ ಸ್ವಾಮಿ ವಿವೇಕಾನಂದರ 155ನೇ ಜನ್ಮದಿನವನ್ನು ಇಂದು ದೇಶದಲ್ಲಿ ‘ರಾಷ್ಟ್ರೀಯ ಯುವ ದಿನ’ವನ್ನಾಗಿ ಆಚರಿಸಲಾಗುತ್ತಿದೆ.
ಯುವಕರಿಗೆ ಸ್ಫೂರ್ತಿಯ ಸೆಲೆಯಾಗಿರುವ ವಿವೇಕಾನಂದರು 1863ರ ಜನವರಿ 12ರಂದು ಕೋಲ್ಕತ್ತಾದಲ್ಲಿ ನರೇಂದ್ರನಾಥ ದತ್ತ ಆಗಿ ಜನಿಸಿದರು.
ಭಾರತದ ವೇದಾಂತ ತತ್ವಶಾಸ್ತ್ರ, ಯೋಗ, ಹಿಂದೂ ಧರ್ಮದ ಸಾರವನ್ನು ಜಗತ್ತಿಗೆ ತಿಳಿಸಿಕೊಟ್ಟವರಲ್ಲಿ ವಿವೇಕಾನಂದರು ಅಗ್ರಗಣ್ಯರು. ಅವರ ದೇಶಭಕ್ತಿ, ಸ್ಫೂರ್ತಿಯ ಮಾತುಗಳಿಗೆ ಸರಿಸಾಟಿಯಾದುದು ಯಾವುದೂ ಇಲ್ಲ. ಅದಕ್ಕಾಗಿಯೇ ಅವರನ್ನು ಭಾರತದ ದೇಶಭಕ್ತ ಸನ್ಯಾಸಿ ಎಂದೇ ಕರೆಯಲಾಗುತ್ತದೆ.
ಯುವಕರಿಗೆ ಪ್ರೇರಣೆಯಾಗಿರುವ ವಿವೇಕಾನಂದರ ಜನ್ಮದಿನವನ್ನು ದೇಶದಲ್ಲಿ ‘ರಾಷ್ಟ್ರೀಯ ಯುವ ದಿನ’ವನ್ನಾಗಿ ಆಚರಿಸಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.