ದಾವೋಸ್ : ದಾವೋಸ್ನ ಸ್ವಿಸ್ ಮೌಂಟೇನ್ ರೆಸಾರ್ಟ್ನಲ್ಲಿ ನಡೆಯುತ್ತಿರುವ 48 ನೇ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಪ್ರಧಾನ ಭಾಷಣಕಾರರಾಗಿರುವ ಪ್ರಧಾನಿ ನರೇಂದ್ರ ಮೋದಿ ಹಿಂದಿಯಲ್ಲಿ ನಮಸ್ತೆ ಎಂದು ಹೇಳುತ್ತಾ ಭಾಷಣ ಪ್ರಾರಂಭಿಸಿದರು.
ಇಂದು ವಿಶ್ವ ಎದುರಿಸುತ್ತಿರುವ ಮೂರು ದೊಡ್ಡ ಸವಾಲುಗಳು- ಹವಾಮಾನ ಬದಲಾವಣೆ, ಭಯೋತ್ಪಾದನೆ ಮತ್ತು ಶಾಂತಿ, ಸುವ್ಯವಸ್ಥೆ, ಸುರಕ್ಷತೆಯ ಸವಾಲು ಇವುಗಳನ್ನು ನಿಭಾಯಿಸಲು ಎಲ್ಲ ದೇಶಗಳು ಒಂದಾಗಬೇಕು ಎಂದು ಕರೆ ನೀಡಿದರು.
1997ರಲ್ಲಿ ಮಾಜಿ ಪ್ರಧಾನಿ ದೇವೇಗೌಡರು ದಾವೋಸ್ಗೆ ಭೇಟಿ ನೀಡಿದ್ದಾಗ ಭಾರತದ ಜಿಡಿಪಿ 400 ಬಿಲಿಯನ್ ಡಾಲರ್ನಷ್ಟು ಇತ್ತು. ಆದರೆ ಇದೀಗ ಭಾರತದ ಜಿಡಿಪಿ 40 ವರ್ಷಗಳ ಬಳಿಕ 6 ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವದ ಮುಖಂಡರು ಮತ್ತು ಜಾಗತಿಕ ನಾಯಕರುಗಳಿಗೆ ಭಾರತದ ಬೆಳವಣಿಗೆಯ ಬಗ್ಗೆ ವಿವರಿಸಿದರು.
ಭಾರತ ಯಾವಾಗಲೂ ಏಕೀಕರಣ ಮತ್ತು ಮಾನವೀಯ ಮೌಲ್ಯಗಳಲ್ಲಿ ನಂಬಿಕೆ ಹೊಂದಿದೆ. ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಮತ್ತು ರಾಜಕೀಯ ಬದಲಾವಣೆಗಳ ಮಧ್ಯೆ, ಶಾಂತಿ, ಸ್ಥಿರತೆ ಮತ್ತು ಭದ್ರತೆಯ ಸವಾಲುಗಳು ಗಂಭೀರವಾಗಿ ಪರಿಣಮಿಸಿವೆ. 21 ನೇ ಶತಮಾನದಲ್ಲಿ ಜಾಗತಿಕ ಒಗ್ಗಟ್ಟು ಪ್ರಮುಖವಾದದ್ದು ಎಂದ ಪ್ರಧಾನಿ ಮೋದಿಯವರು ‘ವಸುಧೈವ ಕುಟುಂಬಕಂ’ ಶ್ಲೋಕವನ್ನು ಹೇಳಿದರು.
ಭಯೋತ್ಪಾದನೆಯ ಕುರಿತು ಮಾತನಾಡಿದ ಅವರು, ಭಯೋತ್ಪಾದನೆ ವಿಶ್ವಕ್ಕೆ ಮಾರಕವಾಗಿ ಪರಿಣಮಿಸಿದೆ. ಒಳ್ಳೆಯ ಭಯೋತ್ಪಾದನೆ, ಕೆಟ್ಟ ಭಯೋತ್ಪಾದನೆ ಎಂಬುದಿಲ್ಲ. ಹೀಗೆ ತಾರತಮ್ಯ ಮಾಡುವುದು ಅಪಾಯಕಾರಿ ಎಂದು ಹೇಳಿದರು.
ದ್ವಿಪಕ್ಷೀಯ ಮತ್ತು ಬಹುಪಕ್ಷೀಯ ವ್ಯಾಪಾರದಿಂದ ವಿಶ್ವದ ವೃದ್ಧಿಯಾಗಲಿದೆ. ಭಾರತದಲ್ಲಿ ವಿವಿಧತೆಯಲ್ಲಿ ಏಕತೆ ಇದೆ. ಸಬ್ ಕಾ ಸಾತ್ ಸಬ್ ಕಾ ವಿಕಾಸ್ ಎಂಬುದು ನಮ್ಮ ಗುರಿ. ಎಲ್ಲರನ್ನೂ ನಮ್ಮ ಯೋಜನೆಗಳು ತಲುಪಬೇಕು. ಸಾಮಾಜಿಕ, ಆರ್ಥಿಕ ನೀತಿಯಲ್ಲಿ ಕೆಲವು ಸುಧಾರಣೆಗಳಾಗಬೇಕು ಎಂದರು.
ಸುಮಾರು 50 ನಿಮಿಷಗಳ ಕಾಲ ಮಾತನಾಡಿದ ಪ್ರಧಾನಿ ಮೋದಿಯವರು, ತಂತ್ರಜ್ಞಾನ ಜೀವನ ಮಟ್ಟವನ್ನು ಬದಲಾಯಿಸುತ್ತಿದೆ. ತಂತ್ರಜ್ಞಾನದ ಪ್ರಸ್ತುತತೆ ಮತ್ತು ತಂತ್ರಜ್ಞಾನವನ್ನು ಅಭಿವೃದ್ಧಿಗೆ ಬಳಸಿಕೊಳ್ಳುವ ಕುರಿತಂತೆ ಸಂಶೋಧನೆಗಳು ಹೆಚ್ಚಾಗಬೇಕಾಗಿದೆ. ಎಲ್ಲರೂ ಒಗ್ಗೂಡಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.